ಸೌಜನ್ಯ ಕೊಲೆ: ವೀರೇಂದ್ರ ಹೆಗ್ಗಡೆ ಸಂಬಂಧಿಕರ ಕೈವಾಡ, ಆರೋಪ
ಮಂಗಳೂರು, ಫೆಬ್ರವರಿ. 14 : ಮಂಗಳೂರು, ಫೆಬ್ರವರಿ. 14 : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಗ್ಗಡೆ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರೂ ಸೌಜನ್ಯಳ ಹೆತ್ತವರು ಮಾತ್ರ ಮತ್ತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಮೇಲೆ ಆರೋಪ ಮಾಡಿದ್ದಾರೆ.
ಮಂಗಳವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ತಂದೆ ಚಂದಪ್ಪ ಗೌಡ, 'ಕಾಲೇಜು ಬಿಟ್ಟು ಸೌಜನ್ಯಾ ಮನೆಗೆ ಬರುವುದನ್ನ ಜನರು ನೋಡಿದ್ದಾರೆ.[ಸೌಜನ್ಯ ಪ್ರಕರಣ: ಹೆಚ್ಚಿನ ತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶ]

ಆದರೆ, ನಂತರ ನಮ್ಮ ಮಗಳು ಶವದ ರೂಪದಲ್ಲಿ ಪತ್ತೆಯಾಗಿದ್ದಾಳೆ. ಇದು ಅಸಹಜ ಸಾವಲ್ಲ. ಇದು ಕೊಲೆ. ಈ ಕೊಲೆಯ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಸಂಬಂಧಿಕರ ಕೈವಾಡ ಇದೆ' ಎಂದು ಸೌಜನ್ಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಧರ್ಮಸ್ಥಳ ಒಂದು ಗಣ ರಾಜ್ಯದಂತಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಹೋದರ ಹರ್ಷೇಂದ್ರ ಕುಮಾರ್ ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಸೌಜನ್ಯಾ ಕಾಣೆಯಾದ ಕುರಿತು ನಾವು ದೂರು ನೀಡಲು ಹೋದಾಗ ಪೊಲೀಸರು ತುಚ್ಛವಾಗಿ ಮಾತನಾಡಿದರು. ದೂರು ಸ್ವೀಕರಿಸಿ ಅಂದರೆ ಧರ್ಮಸ್ಥಳ ದನಿಗಳ ಒಪ್ಪಿಗೆ ಬೇಕೆಂದರು ಎಂದರು.[ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ: ಸಿಬಿಐ ಅಂತಿಮ ವರದಿ ಸಲ್ಲಿಕೆ]
ಸಂತೋಷ್ ಎಂಬ ಮಾನಸಿಕ ಅಸ್ವಸ್ಥನೊಬ್ಬನನ್ನ ಹಿಡಿದು ಆರೋಪಿಯೆಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ ಅವರು ಶಂಕಿತ ಆರೋಪಿಗಳೇ ಮಾನಸಿಕ ಅಸ್ವಸ್ಥನನ್ನು ಹಿಡಿದುಕೊಟ್ಟಿದ್ದು ಎಂದು ಆರೋಪಿಸಿದರು.
ಅಲ್ಲದೇ ಆಗಿನ ದ.ಕ.ಜಿಲ್ಲಾ ಎಸ್ ಪಿ ಅಭಿಷೇಕ್ ಗೋಯೆಲ್ ತನಿಖೆ ಹಾದಿ ತಪ್ಪಿಸಿದ್ದಾರೆ. ನಮ್ಮ ಮಗಳ ಮರಣೋತ್ತರ ಪರೀಕ್ಷೆಯನ್ನ ತರಾತುರಿಯಲ್ಲಿ ನಡೆಸಿದ್ಯಾಕೆ? ಇದೀಗ ಸಿಬಿಐ ಕೋರ್ಟ್ ಪ್ರಕರಣದ ಸಂಪೂರ್ಣ ಮರುತನಿಖೆ ನಡೆಸುವಂತೆ ಆದೇಶ ನೀಡಿದ್ದು ಸ್ವಾಗತಾರ್ಹ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications