ಮಂಗಳೂರು ದಸರೆಗೆ ವೀರೇಂದ್ರ ಹೆಗ್ಗಡೆರಿಂದ ಚಾಲನೆ

ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿಯ ನವರಾತ್ರಿ ಉತ್ಸವ ಅಕ್ಟೋಬರ್ 5 ರಿಂದ ಆರಂಭಗೊಳ್ಳಲಿದೆ. ನವದುರ್ಗೆಯರ ಹಾಗೂ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಶುಭಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ.ಅ.14ರಂದು ಶಾರದಾ ಮಾತೆಯ ವಿಗ್ರಹದೊಂದಿಗೆ ವೈಭವದ ದಸರಾ ಮೆರವಣಿಗೆ ನಗರದಲ್ಲಿ ನಡೆಯಲಿದೆ ಎಂದು ಎಚ್ ಎಸ್ ಸಾಯಿರಾಂ ಹೇಳಿದರು.
ಕಳೆದ ಬಾರಿ ಶತಮಾನೋತ್ಸವ ಆಚರಿಸಿದ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ. ಉತ್ಸವದ ಅಂಗವಾಗಿ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ ಅ.5 ರಿಂದ ಪ್ರತಿದಿನ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅ.15 ರವರೆಗೆ ನಡೆಯಲಿದೆ ಎಂದು ಹರಿಕೃಷ್ಣ ಬಂಟ್ವಾಳ ತಿಳಿಸಿದ್ದಾರೆ.
ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಕರಾವಳಿಯ ಸಾಂಸ್ಕೃತಿಕ ವೈವಿಧ್ಯತೆಗಳೊಂದಿಗೆ ರಾಜ್ಯದ ವಿವಿಧ ತಂಡಗಳು ಹಾಗೂ ರಾಷ್ಟ್ರ ಮಟ್ಟದ ತಂಡಗಳು ಭಾಗವಹಿಸಿ ಪ್ರದರ್ಶನ ನೀಡಲಿವೆ.
ಶಂಕರ್ ಶ್ಯಾನಭೋಗ್, ಪುತ್ತೂರು ನರಸಿಂಹ ನಾಯಕ್, ಪಲ್ಲವಿ ಪ್ರಭು ಮೊದಲಾದ ಕಲಾವಿದರು ಭಾಗವಹಿಸುವ ಬಗ್ಗೆ ಸೂಚನೆ ನೀಡಿದ್ದಾರೆ. ಇನ್ನು ಕೆಲವು ಕಲಾವಿದರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಸದಸ್ಯರಾದ ಬಿ.ಕೆ.ತಾರನಾಥ್, ಮಹೇಶ್ಚಂದ್ರ,ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾದ ದೇವೇಂದ್ರ ಪೂಜಾರಿ, ದೇವದಾಸ್ ಕಟ್ಟೆಮಾರ್, ಡಾ.ಅನಸೂಯ ಸಾಲ್ಯಾನ್, ದೇವದಾಸ್ ಸುವರ್ಣ, ಎನ್.ಹರಿಶ್ಚಂದ್ರ, ಬಿ.ಟಿ.ಸಾಲ್ಯಾನ್. ಡಾ.ಬಿ.ಜೆ.ಸುವರ್ಣ ಹಾಗೂ ಬಿ.ಪಿ.ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications