ಬಂಟ್ವಾಳದಲ್ಲಿ ಪತ್ತೆಯಾಯಿತು ಅತಿ ಅಪರೂಪದ ಬಿಳಿ ಹೆಬ್ಬಾವು
ಮಂಗಳೂರು, ಜೂನ್ 05: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮನೆಯೊಂದರಲ್ಲಿ ಬಿಳಿ ಬಣ್ಣದ, ಅತಿ ಅಪರೂಪದ "ವೈಟ್ ಆಲ್ಬಿನೊ" ಹೆಬ್ಬಾವು ಕಾಣಿಸಿಕೊಂಡಿದೆ. ಬಂಟ್ವಾಳದ ಕಾವಳಕಟ್ಟೆ ನಿವಾಸಿ ನೌಶದ್ ಎಂಬುವರ ಮನೆಯಲ್ಲಿ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಗಿದೆ.
ಮನೆಯಲ್ಲಿ ಈ ಹಾವು ಕಾಣಿಸಿಕೊಳ್ಳುತ್ತಿದ್ದಂತೆ ಅವರು ಸ್ನೇಕ್ ಕಿರಣ್ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅವರು, ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ನಂತರ ಕಾಡಿಗೆ ಬಿಡಲಾಗಿದೆ. ಈ ಬಿಳಿ ಹೆಬ್ಬಾವು ಅತಿ ಅಪರೂಪದ್ದು ಎನ್ನಲಾಗಿದ್ದು, ಬಂಟ್ವಾಳದಲ್ಲಿ ಕಂಡುಬಂದ ಈ ಹಾವಿನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಬಿಳಿ ಬಣ್ಣದ ಹೆಬ್ಬಾವು ಆಫ್ರಿಕಾದ ಪಶ್ಚಿಮ ಹಾಗೂ ಮಧ್ಯ ಪ್ರಾಂತ್ಯಗಳಲ್ಲಿ ಕಂಡುಬರುತ್ತವೆ. ಈ ಹಾವು ಮಂಗಳೂರಿನಲ್ಲಿ ಕಂಡುಬಂದಿರುವುದು ಅಚ್ಚರಿ ಎನಿಸಿದೆ. ಅತಿ ಇಕ್ಕಟ್ಟಾದ ಜಾಗದಲ್ಲಿ ಸೇರಿಕೊಳ್ಳುವ ಇವು, ರಾತ್ರಿ ಹೊತ್ತು ಚಟುವಟಿಕೆಯಿಂದ ಕೂಡಿರುತ್ತವೆ. ಬಣ್ಣವೇ ಈ ಹಾವಿನ ಆಕರ್ಷಣೆ. ಈ ಹೆಬ್ಬಾವುಗಳು ಹುಟ್ಟುವಾಗ ಚರ್ಮದ ವರ್ಣ ದ್ರವ್ಯದ ಕೊರತೆಯಿಂದ ಹುಟ್ಟುತ್ತವೆ. ಆದ್ದರಿಂದ ಇಂತಹ ಜೀವಿಗಳಿಗೆ ಆಲ್ಟಿನೊ ಎನ್ನುತ್ತಾರೆ.

ಬೇರೆ ಹಾವುಗಳು ಇದರ ಬಣ್ಣದ ಮೇಲೆ ಆಕರ್ಷಣೆಗೊಳಗಾಗಿ ಇದನ್ನು ತಿಂದು ಬಿಡುವ ಪ್ರಸಂಗವೇ ಹೆಚ್ಚಾಗಿರುವುದರಿಂದ ಈ ಹಾವುಗಳು ಆಯಸ್ಸು ಕಡಿಮೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications