ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ.25 ರಂದು ಬೃಹತ್ ಜನಾಗ್ರಹ ಸಮಾವೇಶ
ಮಂಗಳೂರು, ನವೆಂಬರ್ 13:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಾಸನ ರಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೆಚ್ಚುತ್ತಿದ್ದು, ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ 'ಬೃಹತ್ ಜನಾಗ್ರಹ' ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನಿರ್ಧರಿಸಿದೆ.
ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಮುಖಂಡ ಎಂ.ಬಿ.ಪುರಾಣಿಕ್, ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ 4 ಕಡೆ ಸಮಾವೇಶ ನಡೆಯಲಿದ್ದು, ಮಂಗಳೂರು ವಿಭಾಗದ ನಾಲ್ಕು ಕಡೆ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಅಯೋಧ್ಯೆ ವಿವಾದ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ
ನವೆಂಬರ್ 25 ಮಂಗಳೂರು, 18 ಕಾಸರಗೋಡು, 30 ಕೊಡಗು ಮತ್ತು ಡಿಸೆಂಬರ್ 2 ರಂದು ಉಡುಪಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಸಮಾವೇಶ ನಡೆಯಲಿದೆ ಎಂದು ಅವರು ತಿಳಿಸಿದರು.
ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್ಪಿ ರ್ಯಾಲಿ
ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಈ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ದೇಶದ ಪ್ರಮುಖ ಸಾಧು-ಸಂತರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಪುರಾಣಿಕ್ ಸ್ಪಷ್ಟಪಡಿಸಿದರು.