ಬಶೀರ್ ಕೊಲೆ ಸಮರ್ಥಿಸಿಕೊಂಡ ವಿಎಚ್ಪಿ ಮುಖಂಡ
ಮಂಗಳೂರು, ಜನವರಿ 28: ಮಂಗಳೂರಿನ ಕೊಟ್ಟಾರ ಚೌಕಿ ಎಂಬಲ್ಲಿ ನಡೆದಿದ್ದ ಬಷೀರ್ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಸಮರ್ಥಿಸಿ ವಿವಾದಿದ ಹೇಳಿಕೆ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ನಡೆದ ಹಡೆದವ್ವನ ಶಾಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಗದೀಶ್ ಶೇಣವ ಈ ಹೇಳಿಕೆ ನೀಡಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಅಮಾಯಕ ದೀಪಕ್ ರಾವ್ ಗೆ ಪ್ರತೀಕಾರವಾಗಿ ಅಬ್ದುಲ್ ಬಷೀರ್ ಹತ್ಯೆಯಾಗಿದೆ. ಬಷೀರ್ ಹತ್ಯೆಯಾಗಿದ್ದಕ್ಕೆ ನಮಗೇನೂ ಚಿಂತೆಯಿಲ್ಲ .ಪ್ರತೀಕಾರಕ್ಕಾಗಿ ಮುಗ್ಧ ಹಿಂದೂಗಳ ಹತ್ಯೆಯಾಗಬೇಕಾದ್ರೆ ಬಷೀರ್ ಹತ್ಯೆ ಮಾಡ್ಬಾರ್ದಾ? ಹಿಂದುಗಳ ರಕ್ಷಣೆಗೆ ಒಂದು ವರ್ಗ ತಯಾರಾಗಿದೆ ಎಂದು ವಿಎಚ್ ಪಿ ಅಧ್ಯಕ್ಷ ನಾಗಿ ಇದನ್ನು ನಾನು ಬಷೀರ್ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಜನವರಿ 3ರಂದು ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಅಬ್ದುಲ್ ಬಷೀರ್ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಷೀರ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.












Click it and Unblock the Notifications