ಫಾಝಿಲ್ ಹತ್ಯೆ ಸಮರ್ಥಿಸಿಕೊಂಡ ಶರಣ್ ಪಂಪ್ವೆಲ್: ಶೌರ್ಯ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ
ಉಳ್ಳಾಲದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಶೌರ್ಯ ಯಾತ್ರೆಯಲ್ಲಿ ಶರಣ್ ಪಂಪ್ವೆಲ್ ಬಹಿರಂಗವಾಗಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದಾರೆ
ತುಮಕೂರು, ಜನವರಿ 30: ತುಮಕೂರಿನಲ್ಲಿ ಗುಜರಾತ್ ಹಿಂಸೆಯನ್ನು ಸಮರ್ಥಿಸಿಕೊಂಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆಯನ್ನು ಕೂಡ ಸಮರ್ಥಿಸಿಕೊಂಡಿದ್ದಾರೆ.
ಉಳ್ಳಾಲದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಶೌರ್ಯ ಯಾತ್ರೆಯಲ್ಲಿ ಶರಣ್ ಪಂಪ್ವೆಲ್ ಬಹಿರಂಗವಾಗಿ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ಶರಣ್ ಪಂಪ್ವೆಲ್ ವಿವಾದಾತ್ಮಕ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್ " ಪ್ರವೀಣ್ ನೆಟ್ಟಾರು ಮಾತ್ರವಲ್ಲ, ಇನ್ನೂ ಕೆಲವು ಹಿಂದೂ ಕಾರ್ಯಕರ್ತರ ಹೆಸರಿತ್ತು ಎಂದು ಎನ್ಐಎ ಹೇಳಿದೆ. ಪಿಎಫ್ಐ ಬ್ಯಾನ್ ಆಗಿದ್ದರೂ ಅವರ ಕಾರ್ಯಕರ್ತರೂ ಇನ್ನೂ ಜೀವಂತ ಇದ್ದಾರೆ' ಎಂದು ಬಹಿರಂಗವಾಗಿ ಕಿಡಿಕಾರಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ ಪಂಪ್ವೆಲ್
ಮಾತು ಮುಂದುವರಿಸಿದ ಅವರು, ಇನ್ನಷ್ಟು ನಮ್ಮ ಕಾರ್ಯಕರ್ತರ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ. ಆದರೆ ನಾನು ಆ ಜಿಹಾದ್ ನಾಯಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಇನ್ನು ಮುಂದೆ ನಮ್ಮ ಕಾರ್ಯಕರ್ತರ ಹತ್ಯೆಯಾದರೆ ಒಂದಕ್ಕೆ ಒಂದಲ್ಲ, ಎರಡಾಗುತ್ತದೆ, ಮೂರಾಗುತ್ತದೆ. ನಮ್ಮ ಕಾರ್ಯಕರ್ತರ ಮೇಲೆ ನೀವು ಹಲ್ಲೆ ಮಾಡಿದರೆ, ನಿಮ್ಮ ಹತ್ತು ಜನರನ್ನು ನಾವು ಆಸ್ಪತ್ರೆಗೆ ಸೇರಿಸುತ್ತೇವೆ ಎಂದು ಶರಣ್ ಪಂಪ್ವೆಲ್ ವಿವಾದಾತ್ಮಕ ಭಾಷಣ ಮಾಡಿದ್ದಾರೆ.

ಹಿಂದೂ ನಾಯಕ ಕಾಂಗ್ರೆಸ್ನಲ್ಲಿದ್ದರೂ ಬೆಂಬಲವಿದೆ
ಉಳ್ಳಾಲದಲ್ಲಿ ಚುನಾವಣೆಗೋಸ್ಕರ ನಾವು ಕಾರ್ಯಕ್ರಮ ಮಾಡುತ್ತಿಲ್ಲ. ಆದರೆ ಉಳ್ಳಾಲದಲ್ಲಿ ಹಿಂದೂ ಶಾಸಕ ಆಯ್ಕೆಯಾಗಬೇಕು ಎನ್ನುವ ಸಂಕಲ್ಪ ನಮ್ಮದು. ಅದಕ್ಕಾಗಿ ನಾವು ಉಳ್ಳಾಲದಲ್ಲಿ ಹಿಂದೂ ಶಾಸಕನ ಆಯ್ಕೆಗಾಗಿ ಅಭಿಯಾನ ಮಾಡುತ್ತಿದ್ದೇವೆ. ಈ ಹಿಂದೂ ಶಾಸಕ ಬಿಜೆಪಿ ಮಾತ್ರ ಅಲ್ಲ, ಕಾಂಗ್ರೆಸ್ನಲ್ಲಿದ್ದರೂ ನಮ್ಮ ಬೆಂಬಲ ಇದೆ. ಉಳ್ಳಾಲದ ಹಿಂದೂ ಕಾಂಗ್ರೆಸ್ಸಿಗರು ಎಷ್ಟು ದಿನ ಗುಲಾಮನ ಕಾಲ ಕೆಳಗೆ ಇದ್ದೀರಿ, ನೀವು ತಾಕತ್ತಿ ದ್ದರೆ, ಒಬ್ಬ ಹಿಂದೂವನ್ನು ಶಾಸಕನಾಗಿ ಗೆಲ್ಲಿಸಿ ಎಂದು ಶರಣ್ ಕರೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿ ಆಗಲಿದೆ
ಸಿದ್ದರಾಮಯ್ಯ ಜೀವನದ ಮೊದಲ ಸತ್ಯವನ್ನು ಮೊನ್ನೆ ಹೇಳಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗುತ್ತಿದೆ ಎಂದು ಸತ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ನೆಲ, ಈ ಮಣ್ಣಲ್ಲಿ ಹಿಂದುತ್ವ ಇದೆ. ನಮಗೆ ಹೆಮ್ಮೆ ಇದೆ, ಈ ಹಿಂದುತ್ವದ ಫ್ಯಾಕ್ಟರಿಯಲ್ಲಿ ನಾವು ದೇಶಕ್ಕೋಸ್ಕರ ಕೆಲಸ ಮಾಡುತ್ತಿದ್ದೇವೆ ಸಿದ್ದರಾಮಯ್ಯನವರೇ, ಕೇವಲ ದ.ಕ ಜಿಲ್ಲೆ ಅಲ್ಲ, ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿ ಆಗಲಿದೆ ಎಂದು ಸವಾಲು ಹಾಕಿದ್ದಾರೆ.

ಸುರತ್ಕಲ್ಗೆ ಹೋಗಿ ನುಗ್ಗಿ ನುಗ್ಗಿ ಹೊಡೆದರು
ಗುಜರಾತ್ನಲ್ಲಿ ನಡೆದಿದ್ದು ನರಮೇಧ ಅಲ್ಲ, ಅದು ಹಿಂದೂಗಳ ಪರಾಕ್ರಮ. ಅಲ್ಲಿ ನಡೆದಿದ್ದು ಹಿಂದುಗಳ ಶೌರ್ಯ, ಅದು ನಮ್ಮ ಪರಾಕ್ರಮ. ಅಗತ್ಯ ಬಿದ್ದರೆ, ಭಜರಂಗದಳ ಹೋರಾಟ ಮಾಡುತ್ತದೆ, ಕೆಲವೊಮ್ಮೆ ನಾವು ನುಗ್ಗಿ ಹೊಡೆಯುತ್ತೇವೆ. ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಹಿಂದೂ ಸಮಾಜ ಕಣ್ಣೀರಲ್ಲಿ ಮುಳುಗಿತ್ತು. ಇಡೀ ಜಿಲ್ಲೆ ಒಬ್ಬ ಉತ್ತಮ ಕಾರ್ಯಕರ್ತನ ಬಲಿದಾನಕ್ಕೆ ಬೇಸರ ಪಟ್ಟಿತ್ತು. ಆಗ ನಮ್ಮ ಕಾರ್ಯಕರ್ತರು ಅವನ ಬಲಿದಾನ ನೋಡಿ ಸುಮ್ಮನೆ ಕೂರಲಿಲ್ಲ. ಸುರತ್ಕಲ್ಗೆ ಹೋಗಿ ನುಗ್ಗಿ ನುಗ್ಗಿ ಹೊಡೆದರು. ಅದು ನಮ್ಮ ಶೌರ್ಯ. ಸುರತ್ಕಲ್ನಲ್ಲಿ ಹೊಡೆದ ವಿಡಿಯೋವನ್ನು ಎಲ್ಲರೂ ನೋಡಿದ್ದೀರಾ ಎಂದು ಶರಣ್ ಪಂಪ್ವೆಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications