ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ ವೈರಲ್; "ನಮ್ ಸುದ್ದಿಗೆ ಬಂದರೆ ಕೈಕಾಲ್ ತೆಗಿತೀವಿ" ಯುಟಿ ಖಾದರ್ ಗೆ ಕೊಲೆ ಬೆದರಿಕೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 28: ಸಿಎಎ ಸಮರ್ಥನಾ ಸಮಾವೇಶದ ಸಂದರ್ಭ ಮಾಜಿ ಸಚಿವ ಯು.ಟಿ.ಖಾದರ್ ಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

ಮಲಯಾಳಂ ಭಾಷೆಯಲ್ಲಿ ಖಾದರ್ ಅವರಿಗೆ ಜೀವ ಬೆದರಿಕೆ ಹಾಕಿರುವ ಈ ವಿಡಿಯೋ ಎಲ್ಲೆಲ್ಲೂ ಹರಿದಾಡುತ್ತಿದ್ದು, "ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್. ಬೇಕಾದರೆ ತಲೆ ಕಡಿಯುವೆವು" ಎಂದು ಕೊಲೆ ಬೆದರಿಕೆ ಹಾಕಲಾಗಿದೆ. ಸಿಎಎ ಸಮರ್ಥನಾ ಸಮಾವೇಶದ ವೇಳೆ ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಖಾದರ್ ‌ಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Video Of Murder Threat To UT Khader Viral

 'ಸತ್ಯಕ್ಕೆ ಸಾವಿಲ್ಲ': ಎಚ್ಡಿಕೆಗೆ ಧನ್ಯವಾದ ಸಲ್ಲಿಸಿದ ಯು.ಟಿ.ಖಾದರ್ 'ಸತ್ಯಕ್ಕೆ ಸಾವಿಲ್ಲ': ಎಚ್ಡಿಕೆಗೆ ಧನ್ಯವಾದ ಸಲ್ಲಿಸಿದ ಯು.ಟಿ.ಖಾದರ್

ಕೇಸರಿ ರುಮಾಲು, ಶಾಲು ಹಾಕಿಕೊಂಡಿದ್ದ ಕೆಲ ಯುವಕರ ಗುಂಪು ರಸ್ತೆ ಬದಿಯಲ್ಲಿ ನಿಂತು, 'ಖಾದರ್, ನಮ್ಮ ಸುದ್ದಿಗೆ ಬರಬೇಡ. ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್ ಮಾಡ್ತೇವೆ, ಬೇಕಾದ್ರೆ ತಲೆಯನ್ನೂ ಕಡಿಯುವೆವು' ಎಂದು ಘೋಷಣೆ ಕೂಗುತ್ತಾ, ಚಪ್ಪಾಳೆ ತಟ್ಟಿ ಡ್ಯಾನ್ಸ್ ಮಾಡಿದ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ.

ಖಾದರ್ ವಿರುದ್ದ ಪ್ರಕರಣ ದಾಖಲು, ರಾಜಕೀಯ ಮಾಡಲ್ಲ: ಸಿಎಂಖಾದರ್ ವಿರುದ್ದ ಪ್ರಕರಣ ದಾಖಲು, ರಾಜಕೀಯ ಮಾಡಲ್ಲ: ಸಿಎಂ

ವಿಡಿಯೋದ ಆರಂಭದಲ್ಲಿ ಜೈ ಜೈ ಬಿಜೆಪಿ ಎಂದು ಘೋಷಣೆ ಕೂಗಿದ್ದು ಕೇಳಿಬಂದಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರೇ ಯು.ಟಿ ಖಾದರ್ ‌ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

English summary
A video that has threatened to kill former minister UT Khader during a CAA conference has now gone viral
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X