ಮೂಡಬಿದಿರೆಯಲ್ಲಿ ವಿಜಯೋತ್ಸವ ಕಂಬಳಕ್ಕೆ ಹರಿದು ಬಂದ ಜನಸಾಗರ
ಮಂಗಳೂರು, ನವೆಂಬರ್ 12: ಜಾನಪದ ಕ್ರೀಡೆ ಕಂಬಳ ಕರಾವಳಿಯ ಅವಿಭಾಜ್ಯ ಅಂಗ. ಹಲವು ಅಡ್ಡಿ, ಆತಂಕ, ಹೋರಾಟಗಳ ನಡುವೆ ಹೊಯ್ದಾಡಿದ ಕರಾವಳಿಯ ಜಾನಪದ ಕ್ರೀಡೆ ಕಂಬಳ ಈಗ ಮತ್ತೆ ಆರಂಭಗೊಂಡಿದೆ . ಸರಿ ಸುಮಾರು 1 ವರ್ಷ 8 ತಿಂಗಳ ಬಳಿಕ ಕರಾವಳಿಯಲ್ಲಿ ಕಂಬಳದ ಸಂಭ್ರಮ ಕಳೆಕಟ್ಟಿದೆ .
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನಿನ್ನೆ ಸಂಜೆ ಚಾಲನೆ ನೀಡಲಾಯಿತು. ನಿಷೇಧದ ಕಾರ್ಮೋಡ ಕವಿದು ಕವುಚಿ ಮಲಗಿದ್ದ ಕರಾವಳಿಯ ಕಂಬಳ ಈ ಮೂಲಕ ಮತ್ತೆ ತನ್ನ ಗತವೈಭವಕ್ಕೆ ಮರಳಿತು. ಕಂಬಳದ ಹೊಸ ಅಧ್ಯಾಯ ಮತ್ತೆ ತೆರೆದುಕೊಂಡಿತು.

ವಿಜಯೋತ್ಸವ ಕಂಬಳ
ರಾಜ್ಯ ಸರಕಾರದ ಅಧ್ಯಾದೇಶಕ್ಕೆ ಸುಪ್ರಿಂ ಕೋರ್ಟ್ ತಡೆ ನೀಡಲು ನಿರಾಕರಿಸಿ ಕಂಬಳಕ್ಕೆ ಅನುವು ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಕಂಬಳ ಅಭಿಮಾನಿಗಳು ಮೂಡಬಿದಿರೆಯಲ್ಲಿ ಆರಂಭಗೊಂಡ ಈ ಜೋಡುಕೆರೆ ಕಂಬಳವನ್ನು ವಿಜಯೋತ್ಸವದ ಕಂಬಳವಾಗಿ ಆಚರಿಸುತ್ತಿದ್ದಾರೆ.

140 ಜತೆ ಕೋಣಗಳು ಭಾಗಿ
ಮೂಡಬಿದಿರೆ ಕ್ಷೇತ್ರದ ಶಾಸಕ ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ ನಡೆದ ಈ ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಸರಿ ಸುಮಾರು 140 ಕ್ಕೂ ಹೆಚ್ಚು ಜತೆ ಕೋಣಗಳು ಭಾಗವಹಿಸಿದವು. ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ತಂಡಗಳು ಈ ಜೋಡುಕೆರೆ ಕಂಬಳದಲ್ಲಿ ಭಾಗವಹಿಸಿದ್ದವು .

ಎಲ್ಲಾ ವಿಭಾಗಗಳಲ್ಲಿ ಸ್ಪರ್ಧೆ
ಕೊಂಬು, ಕಹಳೆ, ಚಂಡೆಯ ಝೇಂಕಾರದೊಂದಿಗೆ ಕನೆ ಹಲಿಗೆಯ ಕೋಣಗಳು ನಿಶಾನೆಯತ್ತ ನೀರು ಹಾಯಿಸುತ್ತಿದ್ದಂತೆ ಕಂಬಳಾಭಿಮಾನಿಗಳ ಘೋಷಣೆ ಮುಗಿಲುಮುಟ್ಟಿತ್ತು. ಹಗ್ಗ ಹಿರಿಯ, ಹಗ್ಗ ಕಿರಿಯ, ಕನೆ ಹಲಿಗೆ, ನೇಗಿಲು ಹಿರಿಯ , ನೇಗಿಲು ಕಿರಿಯ ಹೀಗೆ ಎಲ್ಲಾ ವಿಭಾಗಗಳಲ್ಲೂ ಸ್ಪರ್ಧೆಗಳನ್ನು ಇಡಲಾಗಿತ್ತು.

ಸಾವಿರಾರು ಅಭಿಮಾನಿಗಳು ಭಾಗಿ
ನಿನ್ನೆ ರಾತ್ರಿ ಹೊನಲು ಬೆಳಕಿನಲ್ಲಿ ಕಂಬಳ ಸ್ಪರ್ಧೆಗಳು ನಡೆದಿದ್ದು ಇಂದು ಕೂಡ ಮುಂದುವರೆದಿದೆ. ನಿನ್ನೆ ಸಂಜೆಯಿಂದ ಸಹಸ್ರಾರು ಕಂಬಳಾಭಿಮಾನಿಗಳು, ಗಣ್ಯರು ಆಗಮಿಸಿ ಕಂಬಳದ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ .

ತುಂಬಿ ತುಳುಕಿದ ಗ್ಯಾಲರಿ
ಮಹಿಳೆಯರ ಗ್ಯಾಲರಿ ಸೇರಿದಂತೆ ಕಂಬಳ ಗದ್ದೆಯ ಇಕ್ಕಲೆಗಳಲ್ಲಿ ಇರುವ ಗ್ಯಾಲರಿ ತುಂಬಿ ತುಳುಕುತ್ತಿದ್ದು ಒಟ್ಟಿನಲ್ಲಿ ಒಂದೂವರೆ ವರ್ಷದ ಬಳಿಕ ನಡೆಯುತ್ತಿರುವ ಕಂಬಳವನ್ನು ತುಳುವರಿಗೆ ತುಳುವರೇ ಸಂಭ್ರಮಿಸುತ್ತಿದ್ದಾರೆ .
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications