ಮತಯಾಚನೆಗೆ ಬಂದ ವಸಂತ ಬಂಗೇರಾರನ್ನು ಹಿಂದಕ್ಕೆ ಕಳುಹಿಸಿದ ಗ್ರಾಮಸ್ಥರು
ಮಂಗಳೂರು ಮೇ 05: ಚುನಾವಣೆ ಸಂದರ್ಭದಲ್ಲಿಮಾತ್ರ ಗ್ರಾಮೀಣ ಪ್ರದೇಶಗಳನ್ನು ನೆನೆದು ಹಳ್ಳಿಗಳತ್ತ ಹೆಜ್ಜೆ ಹಾಕುವ ರಾಜಕಾರಣೆ ಗಳಿಗೆ ಹಳ್ಳಿಜನರು ತಕ್ಕ ಪಾಠ ಕಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಚುನಾವಣೆ ಸಂದರ್ಭದಲ್ಲಿ ಮತ ಕೇಳುವುದಕ್ಕೆ ಮಾತ್ರ ಹಳ್ಳಿಗೆ ಹೋಗುವ ಜನಪ್ರತಿನಿಧಿಗಳಿಗೆ ಚುನಾವಣೆಗೆ ದಿನಗಣನೆ ಆರಂಭ ವಾದಾಗಲೇ ಜನ ಪ್ರತೀಕಾರ ತೀರಿಸುತ್ತಾರೆ. ಇದಕ್ಕೆ ತಕ್ಕ ನಿದರ್ಶನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿ ನಡೆದಿರೋ ಘಟನೆ ಈಗ ಭಾರೀ ಚರ್ಚೆಗೆ ಗ್ರಾಸ ವಾಗಿದೆ.
ನಡ ಗ್ರಾಮದ ಸೂರ್ಯ ದೇವಸ್ಥಾನದ ಬಳಿಗೆ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಚುನಾವಣಾ ಪ್ರಚಾರಕ್ಕಾಗಿ ಹೋಗಿದ್ದಾಗ ಸ್ಥಳೀಯ ಗ್ರಾಮಸ್ಥರು ಅಡ್ಡಹಾಕಿದ್ದಾರೆ. ನಾಲ್ಕು ವರ್ಷದಿಂದ ಇಲ್ಲಿನ ರಸ್ತೆ ರಿಪೇರಿಗಾಗಿ ಮನವಿ ಮಾಡುತ್ತಿದ್ದೇವೆ.

ನೀವು ಉದ್ದೇಶಪೂರ್ವಕ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದ್ದೀರಿ ಅಂತಾ ಶಾಸಕ ವಸಂತ ಬಂಗೇರ ಮತ್ತು ಜೊತೆಗಿದ್ದ ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಾಸಕರು ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ಎಷ್ಟೇ ಮನವರಿಕೆ ಮಾಡಿದರೂ ಗ್ರಾಮಸ್ಥರು ಮಾತ್ರ ರಸ್ತೆಗೆ ಅಡ್ಡ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಮತ ಕೇಳಲು ಮಾತ್ರ ಹಳ್ಳಿಗೆ ಬರ್ತೀರಿ, ಆಮೇಲೆ ತಿರುಗಿ ನೋಡುವುದಿಲ್ಲ ಅಂತಾ ಶಾಸಕರನ್ನೇ ದಬಾಯಿಸಿದ್ದಾರೆ. ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದ ಗ್ರಾಮಸ್ಥರನ್ನು ಶಾಸಕರು ಸಮಾಧಾನ ಹೇಳಿ ಹಿಂತಿರುಗಿದ್ದಾರೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕರಾಗಿ ದರ್ಪ ಮೆರೆಯುವ ರಾಜಕಾರಣಿಗಳನ್ನು ಚುನಾವಣೆ ಸಂದರ್ಭದಲ್ಲಿ ಸಾಮಾನ್ಯ ಜನರು ಪ್ರಶ್ನೆ ಮಾಡುವಂತಾಗಿದ್ದು ಜಾಲತಾಣಗಳಲ್ಲಿ ಪ್ರಶಂಸೆಗೆ ಕಾರಣವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications