ಪುತ್ರ ಶೋಕಂ ನಿರಂತರಂ, ಬಾಳಿಗ ಅವರ ತಾಯಿ ನಿಧನ
ತಮ್ಮ ಪ್ರೀತಿಯ ಮಗನನ್ನು ಕಳೆದುಕೊಂಡಿದ್ದ ಬಾಳಿಗಾ ಕುಟುಂಬಕ್ಕೆ ಇನ್ನೊಂದು ಅಘಾತವಾಗಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳೂರಿನ ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರ ತಾಯಿ ಜಯಂತಿ ಬಾಳಿಗ (81) ನಿಧನರಾಗಿದ್ದಾರೆ.
ಮಂಗಳೂರು, ಜನವರಿ 08 : ತಮ್ಮ ಪ್ರೀತಿಯ ಮಗನನ್ನು ಕಳೆದುಕೊಂಡಿದ್ದ ಬಾಳಿಗಾ ಕುಟುಂಬಕ್ಕೆ ಇನ್ನೊಂದು ಅಘಾತವಾಗಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳೂರಿನ ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರ ತಾಯಿ ಜಯಂತಿ ಬಾಳಿಗ (81) ನಿಧನರಾಗಿದ್ದಾರೆ.
ಜಯಂತಿ ಅವರು ಪತಿ ಬಿ.ರಾಮಚಂದ್ರ ಬಾಳಿಗಾ ಹಾಗೂ ನಾಲ್ವರು ಪುತ್ರಿಯರಾದ ಶ್ವೇತಾ, ಆಶಾ, ಅನು ಮತ್ತು ಹರ್ಷಾರನ್ನು ಅಗಲಿದ್ದಾರೆ. ಜಯಂತಿ ಬಾಳಿಗಾ ಅವರು ತಮ್ಮ ಏಕೈಕ ಪುತ್ರ ವಿನಾಯಕ ಬಾಳಿಗಾರ ಹತ್ಯೆಗೀಡಾಗಿ ಸಾವನ್ನಪ್ಪಿದ ಬಳಿಕ ಖಿನ್ನತೆಗೊಳಗಾಗಿದ್ದರು.
ಶನಿವಾರದಂದು ಜಯಂತಿ ಅವರು ಅಸೌಖ್ಯದಿಂದ ಕುಸಿದು ಬಿದ್ದು ತಲೆಗೆ ಗಂಭೀರ ಏಟು ಬಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅದು ಪ್ರಯೋಜನವಾಗದೇ ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ತಮ್ಮ ಕೊನೆ ಉಸಿರೆಳೆದಿದ್ದಾರೆ. [ಬಾಳಿಗ ಕೊಲೆ ಪ್ರಕರಣ : ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ]

ತನ್ನ ಮಗನನ್ನು ಕೊಲೆಗೈದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ನಾನು ಜೀವಂತವಾಗಿರುವಾಗಲೇ ನ್ಯಾಯ ನಮ್ಮ ಪರ ಬರಬೇಕೆಂದು ಗಂಡ ಹೆಂಡತಿ ಇಬ್ಬರು ಸಕ್ಕಷ್ಟು ಹೋರಾಟ ಮಾಡಿದ್ದಾರೆ ಆದರೆ ತಮ್ಮ ಮಗನ ಪರ ನ್ಯಾಯ ಸಿಗುವ ಮುಂಚೆಯೇ ಜಯಂತಿಬಾಳಿಗರವರು ಇಹಲೋಕ ತ್ಯಜಿಸಿದ್ದಾರೆ.
ಮಂಗಳೂರಿನ ಆರ್ ಟಿಐ ಕಾರ್ಯಕರ್ತರಾಗಿದ್ದ ವಿನಾಯಕ ಬಾಳಿಗ ರನ್ನು ಕಳೆದ ಮಾರ್ಚ್ 21ರಂದು ಮುಂಜಾನೆ ಬರ್ಬರವಾಗಿ ಹತ್ಯೆಗೈಯಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications