ವಿನಾಯಕ್ ಬಾಳಿಗಾ ಕೊಲೆ: ಕಾಶಿ ಮಠದ ಸಂಯಮೀಂದ್ರ ಸ್ವಾಮೀಜಿ ತನಿಖೆಗೆ ಮನವಿ
ಮಂಗಳೂರು, ಜೂನ್ 07 : ಆರ್ ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶಿ ಮಠದ ಸಂಯಮೀಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ 14 ಮಂದಿಯನ್ನು ಈ ಪ್ರಕರಣದಲ್ಲಿ ತನಿಖೆಗೊಳಪಡಿಸಬೇಕೆಂದು ಬಾಳಿಗಾ ಅವರ ಕಿರಿಯ ಸಹೋದರಿ ಅನುರಾಧಾ ಬಾಳಿಗಾ ಕೋರಿದ್ದಾರೆ.
ಕಾಶಿ ಮಠದ ಸಂಯಮೀಂದ್ರ ತೀರ್ಥ ಸ್ವಾಮೀಜಿಯನ್ನೂ ಈ ಪ್ರಕರಣದಲ್ಲಿ ತನಿಖೆಗೊಳಪಡಿಸಬೇಕೆಂದು ಈ ಬಗ್ಗೆ ಅನುರಾಧಾ ಬಾಳಿಗಾ ಅವರು ನಗರದ ಮೂರನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ.[ಬಾಳಿಗಾ ಕೊಲೆ ಪ್ರಕರಣ ಮರು ತನಿಖೆಗೆ ಸಂಬಂಧಿಕರ ಆಗ್ರಹ]

"ನರೇಶ್ ಶೆಣೈಗೆ 30 ಲಕ್ಷ ರು. ಸುಪಾರಿ ಕೊಟ್ಟು ಸ್ವಾಮೀಜಿ ಮತ್ತವರ ತಂಡ ಈ ಕೊಲೆ ಮಾಡಿಸಿದೆ. ಹಾಗೂ ಸ್ವಾಮೀಜಿ ತಮ್ಮ ಹಣಬಲದಿಂದ ಪೊಲೀಸ್ ತನಿಖೆ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ" ಎಂದು ಅನುರಾಧಾ ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
"ವಿನಾಯಕ ಬಾಳಿಗಾ ಅವರು ಕಾಶಿ ಮಠಕ್ಕೆ ಸೇರಿದ ಮಂಗಳೂರಿನ ಕಾರ್ ಸ್ಟ್ರೀಟಿನಲ್ಲಿನ ವೆಂಕಟರಮಣ ದೇವಾಲಯದದ ಕೋಟ್ಯಂತರ ರು. ಅವ್ಯವಹಾರದ ಬಗ್ಗೆ ಲೆಕ್ಕ ಪರಿಶೋಧನೆ ನಡೆಸಲು ಕೋರಿ ಉಮೇಶ್ ಮಲ್ಯ ಉರುಫ್ ಸಂಯಮೀಂದ್ರ ತೀರ್ಥ ಸ್ವಾಮಿಗಳಿಗೆ ಪತ್ರ ಬರೆದಿದ್ದೇ ಅವರ ಹತ್ಯೆಗೆ ಕಾರಣವಾಯಿತು" ಎಂದು ತಿಳಿಸಿದ್ದಾರೆ.
ಆರೋಪಿಗಳಾಗಿ ಸ್ವಾಮಿ ಮತ್ತು 14 ಮಂದಿ ಇತರರ ಹೆಸರು ಉಲ್ಲೇಖಿಸಿ ಅವರೆಲ್ಲರ ವಿರುದ್ಧವೂ ತಮ್ಮ ಬಳಿ ಸಾಕ್ಷ್ಯಗಳಿದ್ದು ಅವರನ್ನು ಮರುತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಸಂಯಮೀಂದ್ರ ಹೊರತಾಗಿ ಲೆಕ್ಕ ಪರಿಶೋಧಕ ಜಗನ್ನಾಥ ಕಾಮತ್, ನಿವೃತ್ತ ಬ್ಯಾಂಕ್ ಉದ್ಯೋಗಿ ಸಿ ಎಲ್ ಶೆಣೈ, ಚಿನ್ನ ವ್ಯಾಪಾರಿ ರವೀಂದ್ರ ನಿಕ್ಕಂ, ಉದ್ಯಮಿಗಳಾದ ಸುರೇಶ್ ಕಾಮತ್, ಜಿ ವಿ ಕಾಮತ್, ಚೇತನ ಕಾಮತ್, ವಿಘ್ನೇಶ್ ನಾಯಕ್, ಸ್ವಾಮಿಯ ಕಾರು ಚಾಲಕ ಬಂಟ್ವಾಳದ ವಿಜಯಾನಂದ ಶೆಣೈ, ಬೆಂಗಳೂರಿನ ಶಾಖಾ ಮಠದ ಕಾರ್ಯದರ್ಶಿ ಕೆ ನಾರಾಯಣ ಶೆಣೈ, ವೇದವ್ಯಾಸ ಕಾಮತ್, ವಿಶ್ವನಾಥ್ ಭಟ್, ಹನುಮಂತ ಕಾಮತ್ ಹಾಗೂ ಕಾರ್ಕಳದ ರಾಧಾಮಾಧವ ಶೆಣೈ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.
ಈ ಪ್ರಕರಣದ ವಿಚಾರಣೆ ಜೂನ್ 26ರಂದು ನಡೆಯಲಿದೆ. ಈ ಬೆಳವಣಿಗೆಯ ಬಗ್ಗೆ ಸ್ವಾಮಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾಗಿದ್ದು ಅವರ ಸಮೀಪವರ್ತಿಯೊಬ್ಬರು ನ್ಯಾಯಾಲಯದ ತೀರ್ಪಿಗೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications