ಕಂಬಳದಲ್ಲಿ ಚಿನ್ನ ಗೆದ್ದು ಯಜಮಾನನಿಗೆ ಅರ್ಥಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಕೋಣಗಳು
ಮಂಗಳೂರು, ಜನವರಿ 21: ಪುತ್ತೂರಿನ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ತೆರೆಬಿದ್ದಿದೆ. ಜನವರಿ 19 ರಂದು ಶನಿವಾರ ಮುಂಜಾನೆ ಆರಂಭವಾದ ಪುತ್ತೂರಿನ 26 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಭಾನುವಾರ (ಜನವರಿ 20) ರಂದು ಸಂಜೆಯ ವೇಳೆಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ. ಈ ಕಂಬಳ ಸ್ಪರ್ಧೆಯಲ್ಲಿ ಜನರ ಗಮನ ಸೆಳೆದಿದ್ದು ಹಗ್ಗ ಹಿರಿಯ ವಿಭಾಗದಲ್ಲಿ ಸ್ಪರ್ಧಿಸಿದ್ದ ಮೂಡಬಿದ್ರೆ ಕರಿಂಜೆ ವಿನು ವಿಶ್ವನಾಥ ಶೆಟ್ಟರ ಕೋಣಗಳು.
ಇತ್ತೀಚೆಗೆ ಹೃದಯಾಘಾತದಿಂದ ಕರಿಂಜೆ ವಿನು ವಿಶ್ವನಾಥ ಶೆಟ್ಟಮೃತಪಟ್ಟಿದ್ದರು. ಹಗ್ಗ ಹಿರಿಯ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನು ವಿಶ್ವನಾಥ ಶೆಟ್ಟಿಯವರ ಕೋಣಗಳು ಪ್ರಥಮ ಸ್ಥಾನ ಪಡೆದು ಅಗಲಿದ ಪ್ರೀತಿಯ ಯಜಮಾನನಿಗೆ ಅರ್ಥಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದವು.
ಹೊಕ್ಕಾಡಿಗೋಳಿ ಎಂಬಲ್ಲಿ ನಡೆದ ಕಂಬಳದಿಂದ ಹಿಂದೆ ಬರುವ ಸಮಯದಲ್ಲಿ ಹೃದಯಾಘಾತದಿಂದ ವಿನು ಕರಿಂಜೆ ವಿಶ್ವನಾಥ ಶೆಟ್ಟ ನಿಧನರಾದರು. ಹೊಕ್ಕಾಡಿಗೋಳಿ ಕಂಬಳದಲ್ಲಿ ವಿನು ವಿಶ್ವನಾಥ್ ಶೆಟ್ಟರ ಕೋಣಗಳು ಪ್ರಥಮ ಸ್ಥಾನ ಪಡೆದಿದ್ದವು. ಆದರೆ ಆ ಸಂತೋಷ ಸಂಭ್ರಮದಲ್ಲಿ ಪಾಲ್ಗೊಳ್ಳಲು ವಿನು ವಿಶ್ವನಾಥ ಶೆಟ್ಟ ಇರಲಿಲ್ಲ.

ನಂತರ ನಡೆದ ಎರಡು ಕಂಬಳದಲ್ಲಿ ಈ ಕೋಣಗಳು ಭಾಗವಹಿಸಿರಲಿಲ್ಲ. ಆದರೆ ನಿನ್ನೆ ಪುತ್ತೂರಿನಲ್ಲಿ ನಡೆದ ಕೋಟಿ ಚೆನ್ನಯ ಜೋಡು ಕೆರೆ ಕಂಬಳದಲ್ಲಿ ವಿನು ವಿಶ್ವನಾಥ ಶೆಟ್ಟರ ಕೋಣಗಳು ಪಾಲ್ಗೊಂಡು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡವು. ಈ ಮೂಲಕ ಕಂಬಳದಲ್ಲಿ ಮತ್ತೆ ಯಜಮಾನನ ಹೆಸರು ಮೊಳಗುವಂತೆ ಮಾಡಿದವು.

ಕೋಟಿ ಚಿನ್ನಯ ಜೋಡುಕೆರೆ ಕಂಬಳದಲ್ಲಿ ಒಟ್ಟು 133 ಜೊತೆ ಕೋಣಗಳು ಭಾಗವಹಿಸಿದ್ದವು. ಕಂಬಳದ ಕನೆಹಲಗೆ ಸ್ಪರ್ಧೆಯಲ್ಲಿ 3 ಜೊತೆ, ಅಡ್ಡಹಲಗೆ ಸ್ಪರ್ಧೆಯಲ್ಲಿ 4 ಜೊತೆ, ಹಗ್ಗ ಹಿರಿಯ ಸ್ಪರ್ಧೆಯಲ್ಲಿ 18 ಜೊತೆ, ನೇಗಿಲು ಹಿರಿಯ ಸ್ಪರ್ಧೆಯಲ್ಲಿ 22 ಜೊತೆ, ಹಗ್ಗ ಕಿರಿಯ ಸ್ಪರ್ಧೆಯಲ್ಲಿ 12 ಜೊತೆ, ನೇಗಿಲು ಕಿರಿಯ ಸ್ಪರ್ಧೆಯಲ್ಲಿ 72 ಜೊತೆ ಕೋಣಗಳು ಭಾಗವಹಿಸಿದ್ದವು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications