Get Updates
Get notified of breaking news, exclusive insights, and must-see stories!

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ:ಮಂಜೇಶ್ವರದಲ್ಲಿ 144 ಸೆಕ್ಷನ್ ಜಾರಿ

ಮಂಗಳೂರು, ಜನವರಿ 04: ಇಬ್ಬರು ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ್ದನ್ನು ಖಂಡಿಸಿ ಕೇರಳದಲ್ಲಿ ನಡೆಯುತ್ತಿರುವ ಘರ್ಷಣೆ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಶಬರಿಮಲೆ ಕರ್ಮ ಸಮಿತಿ ಮತ್ತು ಬಿಜೆಪಿ ಕರೆನೀಡಿದ್ದ ಹರತಾಳ ಸಂದರ್ಭದಲ್ಲಿ ಕೇರಳದ ಎಲ್ಲೆಡೆ ಘರ್ಷಣೆಗಳು ಸೇರಿದಂತೆ ಹಿಂಸಾಕೃತ್ಯಗಳು ನಡೆದಿದೆ.

ಡಿಜಿಲ್ಲೆ ಕಾಸರಗೋಡಿನಲ್ಲಿ ಹಿಂಸಾಕೃತ್ಯಗಳು ಮುಂದುವರೆದ ಹಿನ್ನೆಲೆಯಲ್ಲಿ ಮಂಗಜೇಶ್ವರ ತಾಲೂಕಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಜಿಲ್ಲಾಡಳಿತ ಇಂದು ರಜೆ ಸಾರಿದೆ.

ಗಡಿಭಾಗ ಮಂಜೇಶ್ವರ ಬಳಿಯ ಕುಂಜತ್ತೂರು ಎಂಬಲ್ಲಿ ನಿನ್ನೆ ಗುರುವಾರ ತಡರಾತ್ರಿ ಐವರು ಅಯ್ಯಪ್ಪ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಅಯ್ಯಪ್ಪ ವ್ರತಧಾರಿಗಳು ಕರ್ನಾಟಕದಿಂದ ತೆರಳಿದವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

Violence continued in Kerala ,Sec 144 imposed in Manjeshwara

ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂತೋಷ್, ಶರತ್, ರಾಜೇಶ್, ನಿತೇಶ್, ಗುಣಪಾಲ್ ಎಂಬವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.ಅದಲ್ಲದೇ ಮಂಜೇಶ್ವರದ ಕಡಂಬಾರು ದೇವಸ್ಥಾನದ ಬಳಿಯಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ್ದಾರೆ.

ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ. ಪರಿಸರದಲ್ಲಿ ಹಿಂಸೆ ಕೋಮುದ್ವೇಷಕ್ಕೆ ತಿರುಗದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದ್ದು ಆಯಕಟ್ಟಿನ ಜಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+