ಸುರತ್ಕಲ್: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ದೃಷ್ಟಿಹೀನ ತ್ರಿವಳಿ ಸಹೋದರರು; ನೆರವಿಗೆ ಧಾವಿಸಿದ ಆಳ್ವಾಸ್
ಸುರತ್ಕಲ್ ನಿವಾಸಿಗಳಾದ ತ್ರಿವಳಿ ಸಹೋದರರು ದೃಷ್ಟಿ ಸಮಸ್ಯೆ ಇದ್ದರೂ ಕೂಡ ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಆಗಿದ್ದು, ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದಾರೆ. ಸಾಧನೆಗೈದ ತ್ರಿವಳಿ ವಿದ್ಯಾರ್ಥಿಗಳ ವಿವರ ಇಲ್ಲಿದೆ ಗಮನಿಸಿ.
ಮಂಗಳೂರು, ಫೆಬ್ರವರಿ, 10: ಶೇಕಡಾ 90ರಷ್ಟು ದೃಷ್ಟಿ ದೋಷ ಇದ್ದರೂ ಛಲ ಬಿಡದ ಸುರತ್ಕಲ್ನ ತ್ರಿವಳಿ ಸಹೋದರರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ.
ಕಡು ಬಡತನದ ಜೊತೆಗೆ ದೃಷ್ಟಿ ದೋಷ ಸಮಸ್ಯೆ ತ್ರಿವಳಿ ಸಹೋದರರನ್ನು ಕಂಗಡೆಸಿತ್ತು. ಆದರೂ ಯಾವುದಕ್ಕೂ ಕುಗ್ಗದೆ ಆತ್ಮಸ್ಥೈರ್ಯದಿಂದ ಸಾಧನೆಯತ್ತ ಹೆಜ್ಜೆ ಇಟ್ಟು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದಾರೆ. ಈ ಸಹೋದರರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ
ಇತ್ತೀಚೆಗಷ್ಟೇ ನಡೆದ ಚಾರ್ಟರ್ಡ್ ಅಕೌಂಟೆಂಟ್ಗಳ ಫೌಂಡೇಶನ್ ಪರೀಕ್ಷೆಯಲ್ಲಿ ಈ ತ್ರಿವಳಿ ಸಹೋದರರು ತೇರ್ಗಡೆಯಾಗಿದ್ದು, 2023 ವರ್ಷದ ಕೊನೆಯಲ್ಲಿ ನಡೆಯುವ ಸಿಎ ಇಂಟರ್ ಮೀಡಿಯೇಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ತ್ರಿವಳಿ ಸಹೋದರರ ಹೆಸರು ಜಯೇಶ್, ಜೀವನ್ ಮತ್ತು ಜಿತೇಶ್. ಮೂಲತಃ ಸುರತ್ಕಲ್ ನಿವಾಸಿಗಳಾಗಿರುವ ಈ ತ್ರಿವಳಿ ಸಹೋದರರ ಪೋಷಕರು ಕಡು ಬಡತನದಲ್ಲೇ ಜೀವನ ಸಾಗಿಸುತ್ತಿದ್ದಾರೆ. ತಂದೆ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರೆ, ತಾಯಿ ಗೃಹಿಣಿಯಾಗಿದ್ದಾರೆ. ಸುರತ್ಕಲ್ನಲ್ಲಿ ವಾಸವಿರುವ ಈ ತ್ರಿವಳಿ ಸಹೋದರರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರಿಗೂ ಉಚಿತ ಶಿಕ್ಷಣ, ಉಚಿತ ಹಾಸ್ಟೆಲ್, ಊಟದ ವ್ಯವಸ್ಥೆಯನ್ನು ಮಾಡಿದೆ.

ತ್ರಿವಳಿ ಸಹೋದರರಿಗೆ ನೆರವಾದ ಆಳ್ವಾಸ್
ಸದ್ಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ (ಸಿಎ ಇಂಟಿಗ್ರೇಟೆಡ್) ವ್ಯಾಸಂಗ ಮಾಡುತ್ತಿದ್ದರುವ ತ್ರಿವಳಿಗಳು, ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಪಿಯುಸಿಯನ್ನು ಮೂವರೂ ಶೇಕಡಾ 90ರ ಅಂಕಪಟ್ಟಿಯೊಂದಿಗೆ ತೇರ್ಗಡೆಯಾಗಿದ್ದಾರೆ. ಈ ತ್ರಿವಳಿ ಸಹೋದರರ ಸಾಧನೆಯನ್ನು ಗುರುತಿಸಿ ಆಳ್ವಾಸ್ ನೆರವಿಗೆ ದಾವಿಸಿದೆ.
ಸಿಎ ಆಗಬೇಕೆಂಬ ಛಲ ಹೊಂದಿದ ಸಹೋದರರು
ಸಿಎ ಆಗಬೇಕೆಂಬ ಛಲ ಹೊಂದಿರುವ ಸಹೋದರರು ಪ್ರತಿದಿನ ಇದಕ್ಕಾಗಿ ನಾಲ್ಕು ಗಂಟೆ ಅಧ್ಯಯನ ಮಾಡುತ್ತಿದ್ದರು. ಕಲಿಕೆಯ ಜೊತೆಗೆ ಕಾಲೇಜಿನ ವಾತಾವರಣ, ಶಿಕ್ಷಕರ ಪ್ರೋತ್ಸಾಹ, ಸ್ನೇಹಿತರ ಬೆಂಬಲದೊಂದಿಗೆ ಪರೀಕ್ಷೆ ಬರೆದು ಸಾಧಿಸಲು ಸಾಧ್ಯವಾಗಿದೆ ಎಂದು ಸಹೋದರರು ಹೇಳಿದ್ದಾರೆ. ಸಿಎ ಪರೀಕ್ಷೆಯನ್ನು ಉತ್ತೀರ್ಣರಾಗಿ ಮೂವರು ಉದ್ಯೋಗದಲ್ಲಿ ಧೃಡತೆ ಹೊಂದಿ ಕುಟುಂಬವನ್ನು ಬಡತನದಿಂದ ಮುಕ್ತಿಗೊಳಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಹಾಸ್ಟೆಲ್ನಲ್ಲಿ ಒಂದೇ ಕೋಣೆಯಲ್ಲಿ ವಾಸ್ತವ್ಯವಿರುವ ಈ ಸಹೋದರರು ಸಿಎ ಪರೀಕ್ಷೆಗಾಗಿ ಯಾವುದೇ ವಿಶೇಷ ತರಗತಿ ಗಳನ್ನು ಪಡೆದುಕೊಂಡಿಲ್ಲ. ಸ್ವಂತ ಜ್ಞಾನ ಮತ್ತು ಸತತ ಅಧ್ಯಯನದ ಪರಿಣಾಮದಿಂದ ಯಾರ ನೆರವನ್ನೂ ಪಡೆಯದೇ ಸಾಧಿಸಿದ್ದಾರೆ ಎಂದು ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ತ್ರಿವಳಿಗಳ ಪೈಕಿ ಜಯೇಶ್ ಮೇ ತಿಂಗಳಲ್ಲಿ ಸಿಎ ಪರೀಕ್ಷೆ ಬರೆಯಲಿದ್ದಾರೆ. ಇನ್ನಿಬ್ಬರು ನವೆಂಬರ್ನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹೀಗೆ ಪ್ರಥಮ ಪ್ರಯತ್ನದಲ್ಲೇ ಗುರಿ ಮುಟ್ಟಲು ತ್ರಿವಳಿ ಸಹೋದರರು ಶ್ರಮಪಡುತ್ತಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications