ಮಂಗಳೂರಿನ ಆಳಿಕೆಯಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ
ಮಂಗಳೂರು, ಡಿಸೆಂಬರ್ 31 : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಿಟ್ಲ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳದ ಕನ್ಯಾನ ನಿವಾಸಿ ಖಲಂದರ್ (22), ಉತ್ತರಪ್ರದೇಶ ರಾಜ್ಯದ ಅರ್ಮಾನ್ (25) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಸುಮಾರು 1,50,000 ಲಕ್ಷ ಮೌಲ್ಯದ 13 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ಒಂದು ಸ್ಕೂಟರ್ ಸೇರಿದಂತೆ ಒಟ್ಟು 2 ಲಕ್ಷ ರೂ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.
30 ರಂದು ಬಂಟ್ವಾಳ ಉಪ ವಿಭಾಗದ ಡಿ ವೈ ಎಸ್ಪಿ ರವೀಶ್ ಸಿ ಆರ್ ಮತ್ತು ತಂಡದವರಿಗೆ ಬಂದ ಮಾಹಿತಿಯನ್ನಾಧರಿಸಿ ತನಿಖೆ ಮಾಡಿದಾಗ ಅಳಿಕೆ ಗ್ರಾಮದ ಕಾಂತಡ್ಕ ಎಂಬಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಬಳಿ ಗಾಂಜಾವನ್ನು ಇಟ್ಟು ಕೊಂಡು ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ.

ಬಂಟ್ವಾಳ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಗಾಂಜಾ ಮಾರಾಟವಾಗುತ್ತಿದೆ ಎಂಬ ದೂರಿನಂತೆ ಬಂಟ್ವಾಳ ಉಪ ವಿಭಾಗದ ವತಿಯಿಂದ ಈ ಗಾಂಜಾ ಮಾರಾಟವನ್ನು ತಡೆಗಟ್ಟಲು ಎಸ್ಪಿ ಆದೇಶ ನೀಡಿದ್ದರು. ಇದಕ್ಕಾಗಿ ಬಂಟ್ವಾಳ ಡಿ ವೈ ಎಸ್ಪಿ ರವೀಶ್ ಸಿ ಆರ್ ರವರ ನೇತೃತ್ವದಲ್ಲಿ ಒಂದು ತಂಡ ರಚಿಸಲಾಗಿತ್ತು.
ಈ ಪತ್ತೆ ಕಾರ್ಯದಲ್ಲಿ ಡಿ ವೈ ಎಸ್ ಪಿ ರವೀಶ್, ಸಿ ಆರ್, ಸಿ ಪಿ ಐ ಮಂಜಯ್ಯ, ವಿಟ್ಲ ಪಿ ಎಸ್ ಐ ನಾಗರಾಜು, ಎಎಸ್ಐ ರುಕ್ಮಯ್ಯ, ಎಚ್ ಸಿ ಬಾಲಕೃಷ್ಣ, ಹರಿಶ್ಚಂದ್ರ, ರಾಮಚಂದ್ರ, ಸೀತರಾಮ ಗೌಡ, ಪಿಸಿ ಗಳಾದ ಪ್ರವೀಣ್ ರೈ, ಭವಿತ್ ರೈ, ಸತ್ಯ ಪ್ರಕಾಶ್ ರೈ, ಉದಯ್, ವಿಜಯೇಶ್ವರ್ ಮುಂತಾದ ಸಿಬ್ಬಂದಿ ಭಾಗವಹಿಸಿದ್ದರು. ಅಲ್ಲದೇ ದ.ಕ. ಜಿಲ್ಲೆ ಎಸ್ಪಿ ಭೂಷಣ್ ಭೋರಸೆ ಈ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications