ಪುತ್ತೂರು ವಿವೇಕಾನಂದ ವಿದ್ಯಾವರ್ದಕದಿಂದ 90.8 ಎಫ್ಎಂ ಆರಂಭ
ಮಂಗಳೂರು, ಜನವರಿ. 05 : ಯುವಕರ ಆದರ್ಶ ಪ್ರಾಯರಾದ ಸ್ವಾಮಿ ವಿವೇಕಾನಂದರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘ ಜನವರಿ 12ರಂದು ಸಮುದಾಯ ರೇಡಿಯೋ ಪಾಂಚಜನ್ಯ 90.8 ಎಫ್ಎಂ ಬಿಡುಗಡೆ ಮಾಡಲಿದೆ.
ಇದಲ್ಲದೆ ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರ ಒಂದು ದಿನದ ಉದ್ಯೋಗ ಮೇಳ ನಡೆಸಲಿದೆ ಮತ್ತು ಜನವರಿ 13 ರಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಹೊಸ ಕಟ್ಟಡ ಉದ್ಘಾಟನೆ ಕೂಡಾ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಅಲಿಖಿತ ಜ್ಞಾನ ಹರಡುವ ಸಲುವಾಗಿ ಹಾಗೂ ಜನಧ್ವನಿ ಸ್ಥಾಪನೆ. ಮಾತ್ರವಲ್ಲದೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳು, ರಾಷ್ಟ್ರೀಯತೆಯ ಇತ್ಯಾದಿಗಳ ಮೇಲೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ರೇಡಿಯೋ ಬಿಡುಗಡೆಯ ಮಾಡಲಾಗುತ್ತಿದೆ ಎಂದರು.

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜು ರೆಕಾರ್ಡಿಂಗ್ ಸ್ಟುಡಿಯೋ , ಟ್ರಾನ್ಸ್ ಮೀಟರ್ ಬೂತ್ ಮತ್ತು ರೇಡಿಯೋ ಟವರ್ ಒಳಗೊಂಡಿರುತ್ತದೆ.
ಈ ಸಮುದಾಯ ರೇಡಿಯೋ ಶಿಕ್ಷಣ, ಕ್ರೀಡೆ, ವಿಜ್ಞಾನ, ಸಂಗೀತ, ತಂತ್ರಜ್ಞಾನ, ಕೃಷಿ, ಸಾಹಿತ್ಯ, ಹೈನುಗಾರಿಕೆ, ನಾಟಕ ಮತ್ತು ಇತರ ಸ್ಥಳೀಯ ಉತ್ಸವಗಳು ಹಾಗೂ ನೈಜ ಘಟನೆಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದರು.
ಜ಼.13ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಸುಮಾರು 150ಕ್ಕೂ ಅಧಿಕ ಕಂಪನಿಗಳು ಆಗಮಿಸಲಿದ್ದು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಆಸಕ್ತರು ನೋಂದಾಯಿಸಲು ಇ-ಮೇಲ್ ಅಥವಾ 8762837499 ಕರೆ ಮಾಡಬಹುದು. ಉದ್ಯೋಗ ಮೇಳದಲ್ಲಿ ವಿಪ್ರೋ, ಇನ್ಫೋಸಿಸ್, ಐಟಿಸಿ, ಬಿಗ್ ಬಜಾರ್, ವೋಲ್ವೋ, ಫ್ಲಿಪ್ ಕಾರ್ಟ್, ಅಂಬುಜಾ ಸಿಮೆಂಟ್, ಸೇಂಟ್ ಗೊಬೇನ್ ಮಣಿಪಾಲ ತಂತ್ರಜ್ಞಾನ, ಕೋಟಕ್ ಮಹೀಂದ್ರಾ ಕಂಪನಿಗಳು ಭಾಗವಹಿಸಲಿವೆ ಎಂದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications