ಮಂಗಳೂರಿನಲ್ಲಿ ಅಂಧರಿಗಾಗಿ ತಯಾರಿಸಲಾಗಿದೆ ವಿನೂತನ ಕನ್ನಡಕ
ಮಂಗಳೂರು, ಆಗಸ್ಟ್ 06: ದೃಷ್ಟಿಹೀನರು ಈ ಕನ್ನಡಕ ಧರಿಸಿದರೆ ಸಾಕು ತಾವು ಎಲ್ಲಿದ್ದೇವೆ ಎಂದು ತಿಳಿಯುತ್ತದೆ. ಎಲ್ಲಿಗೆ? ಯಾವ ದಿಕ್ಕಿನಲ್ಲಿ ಹೋಗಬೇಕೆಂದು ಗೊತ್ತಾಗುತ್ತದೆ. ಒಟ್ಟಿನಲ್ಲಿ ಅಂಧರ ಬಾಳಿಗೆ ಹೊಸ ಆಶಾಕಿರಣವಾಗಿದೆ ಈ ಕನ್ನಡಕ.
ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಹ್ಯಾದ್ರಿ ಇನ್ನೋವೇಶನ್ ಹಬ್ ಪ್ರಾಯೋಜಿತ ಸಂಸ್ಥೆ ಆರ್ ಡಿ ಎಲ್ ಡೆಕ್ನಾಲಜಿ ಸಂಸ್ಥೆ ಇಂತಹದೊಂದು ಕನ್ನಡಕ ಸಂಶೋಧಿಸಿದೆ. ದೃಷ್ಟಿಹೀನರಿಗೆ ಮಾರ್ಗ ದರ್ಶನ ನೀಡಬಲ್ಲ ಈ ಕನ್ನಡಕವನ್ನು ವಿಸಿಬಲ್ ಲೈಟ್ ಎಂದೇ ಕರೆಯಲಾಗುತ್ತಿದೆ.
ದೃಷ್ಟಿಹೀನರು ಇನ್ನು ಮುಂದೆ ಬೇರೆಯವರನ್ನು ಅವಲಂಬಿಸಿ ಇರಬೇಕಾದ ಅವಶ್ಯಕತೆ ಇಲ್ಲ . ಯಾಕೆಂದರೆ ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಸಹ್ಯಾದ್ರಿ ಇನ್ನೋವೇಶನ್ ಹಬ್ ಪ್ರಾಯೋಜಿತ ಸಂಸ್ಥೆ ಆರ್ ಡಿ ಎಲ್ ಡೆಕ್ನಾಲಜಿ ಸಂಸ್ಥೆ ಹೊಸ ಅವಿಷ್ಕಾರ ನಡೆಸಿದೆ. ವಿ ಎಲ್ ಗ್ಲಾಸ್ ಎಂಬ ವಿಶಿಷ್ಟ ಕನ್ನಡಕದ ಮೂಲಕ ದೃಷ್ಟಿಹೀನರಿಗೊಂದು ವಿಶೇಷ ಕೊಡುಗೆ ನೀಡಿದೆ.

ಸಂಸ್ಥೆಯು ಆರ್ ಡಿ ಎಲ್ ಟೆಕ್ನಾಲಜೀಸ್ ರವರ ವಿ ಎಲ್ ಸಿ ಲ್ಯಾಬ್ ನಲ್ಲಿ ಈ ನೂತನ ಅವಿಷ್ಕಾರ ಮಾಡಿದ್ದು, ಈ ಗ್ಲಾಸ್ ದೃಷ್ಟಿಹೀನರಿಗೆ ಮಾರ್ಗದರ್ಶಕನಂತೆ ಕಾರ್ಯನಿರ್ವಹಿಸುತ್ತದೆ. ಸಿಂಕ್ ಮಾಡಿದ ಮಾಹಿತಿಯಿಂದ ಹಾಗು ಎಲ್ ಇ ಡಿ ಬಲ್ಪ್ ಗಳ ಕಿರಣದಿಂದ ಸ್ವಸ್ಥಾನವನ್ನು ಗುರುತಿಸಿ ಕಂಪನ ಹಾಗು ಇಯರ್ ಫೋನ್ ಮೂಲಕ ವ್ಯಕ್ತಿಗೆ ಮಾಹಿತಿಯನ್ನು ನೀಡುತ್ತದೆ. ಇದರಿಂದ ಎದುರಾಗುವ ಅಪಾಯವನ್ನು ತಡೆಗಟ್ಟ ಬಹುದಾಗಿದೆ.
ಕನ್ನಡದಲ್ಲಿ ಸೆನ್ಸಾರ್ ಅಳವಡಿಸಲಾಗಿದ್ದು, LIFI ತಂತ್ರಜ್ಞಾನ ದ ಮೂಲಕ ಕಿವಿಯೊಳಗೆ ಧರಿಸುವಂತಹ ಇಯರ್ ಫೋನ್ ಮೂಲಕ ಸಂದೇಶ ರವಾನೆಯಾಗುತ್ತದೆ. ಹೀಗೆ ಆಂಧ ವ್ಯಕ್ತಿಯು ಯಾವುದೇ ಅಡೆತಡೆಗಳನ್ನು ಗ್ರಹಿಸಿ ಯಾರ ಸಹಾಯವೂ ಇಲ್ಲದೆ ಎಚ್ಚರಿಕೆಯಿಂದ ಸ್ವತಂತ್ರವಾಗಿ ನಡೆದಾಡಲು ಸಹಾಯ ಮಾಡುತ್ತದೆ.

ಮೂರು ತಿಂಗಳ ಅವಧಿಯ ಕಾಲ ಅವಿರತ ಶ್ರಮದ ಫಲವಾಗಿ ಈ ಕನ್ನಡಕ ತಯಾರಿಸಿದ್ದು, ಇದರ ಬೆಲೆ ಕೇವಲ 500 ರೂಪಾಯಿ. ಒಟ್ಟಿನಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಈ ಹೊಸ ಅವಿಷ್ಕಾರ ಅಂಧರ ಬಾಳಲ್ಲಿ ಬೆಳಕು ನೀಡುವ ಆಶಾಭಾವನೆ ಮೂಡಿಸಿದೆ
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications