ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಎರಡು ದಿನಗಳಿಂದ ಕುಡಿಯುವ ನೀರೇ ಇಲ್ಲ!

|
Google Oneindia Kannada News

ಮಂಗಳೂರು, ಮೇ 8:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರುಣಿಸುವ ತುಂಬೆ ಅಣೆಕಟ್ಟಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹದ ಮಟ್ಟ ಕುಸಿಯುತ್ತಿದೆ. ಈ ಹಿನ್ನೆಲೆಯಲ್ಲಿ ರೇಷನಿಂಗ್‌ ನಿಯಮದಂತೆ ಇಂದು ಬುಧವಾರ ಕೂಡ ಮಂಗಳೂರು ನಗರಕ್ಕೆ ನೀರು ಸರಬರಾಜು ಸ್ಥಗಿತವಾಗಿದ್ದು, ಕಳೆದ ಎರಡು ದಿನಗಳಿಂದ ಕುಡಿಯುವ ನೀರಿಲ್ಲದೆ ಜನರು ಪರಿತಪಿಸುವಂತಾಗಿದೆ.

ತುಂಬೆ ಅಣೆಕಟ್ಟಿನಲ್ಲಿ ಉಳಿದಿರುವುದು ಕೇವಲ 4.90 ಮೀಟರ್ ನೀರು!ತುಂಬೆ ಅಣೆಕಟ್ಟಿನಲ್ಲಿ ಉಳಿದಿರುವುದು ಕೇವಲ 4.90 ಮೀಟರ್ ನೀರು!

ರೇಷನಿಂಗ್‌ ಪರಿಣಾಮ ನಗರದಲ್ಲಿ ನೀರಿಲ್ಲದೆ ಜನರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ.ನಿಯಮದ ಪ್ರಕಾರ ನಗರದಲ್ಲಿ ಮೇ 9ರಂದು ಬೆಳಗ್ಗೆ 6 ಗಂಟೆಯವರೆಗೆ ನೀರು ಪೂರೈಕೆ ಸ್ಥಗಿತಗೊಳಲಿದ್ದು, ಮೇ 9ರಿಂದ 13ರವರೆಗೆ ನೀರು ಸರಬರಾಜು ಇರುತ್ತದೆ.

 ಬರಿದಾದ ತುಂಬೆ ಡ್ಯಾಮ್ ಒಡಲು:ಕ್ರಮ ಕೈಗೊಳ್ಳಲು ಡಿಸಿಗೆ ಆಗ್ರಹ ಬರಿದಾದ ತುಂಬೆ ಡ್ಯಾಮ್ ಒಡಲು:ಕ್ರಮ ಕೈಗೊಳ್ಳಲು ಡಿಸಿಗೆ ಆಗ್ರಹ

ಒಂದು ಅಂದಾಜಿನ ಪ್ರಕಾರ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ 5 ರಿಂದ 5 .5ಸೆಂ.ಮೀಗೆ ಕುಸಿಯುತ್ತಿದೆ.ತುಂಬೆ ಅಣೆಕಟ್ಟಿನಲ್ಲಿ ನಿನ್ನೆ ಸಂಜೆ ವೇಳೆಗೆ ನೀರು 4.27 ಮೀ.ಗೆ ಇಳಿದಿತ್ತು.ಪ್ರಸ್ತುತ ಜಾರಿಯಲ್ಲಿರುವ ನೀರಿನ ರೇಷನಿಂಗ್‌ ವ್ಯವಸ್ಥೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 21ರ ವರೆಗೂ ಇರಲಿದೆ.

Water rationing and supply woes are continued in Mangaluru

ನೀರು ಸರಬರಾಜು ಸಂದರ್ಭದಲ್ಲಿ ನಗರದ ಎತ್ತರದ ಪ್ರದೇಶಗಳಿಗೆ ನೀರು ಲಭ್ಯತೆ ದುಸ್ತರವಾಗಿದ್ದು, ಆ ಪ್ರದೇಶದ ಜನರು ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುವಂತಾಗಿದೆ. ಎತ್ತರ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

English summary
Water rationing and water supply woes are continued in Mangaluru and Dakshina kannada district.Because of rationing people facing problems in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X