ಬಂಗಾರಪ್ಪ ಬಗ್ಗೆ ಬರೆದಿದ್ದೆಲ್ಲ ಸತ್ಯ: ಪೂಜಾರಿ ಮತ್ತೆ ತಡವಿಕೊಂಡರು!
ಮಂಗಳೂರು, ಫೆಬ್ರವರಿ 14: "ನನ್ನ ಆತ್ಮಚರಿತ್ರೆಯಲ್ಲಿ ಏನು ಬರೆದಿದ್ದೇನೋ ಅವೆಲ್ಲವೂ ಸತ್ಯ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಸತ್ಯವನ್ನೇ ಹೇಳಿರುವುದು" ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಮ್ಮ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಮರುಮುದ್ರಿತ 'ಸಾಲ ಮೇಳದ ಸಂಗ್ರಾಮ' ಬಿಡುಗಡೆಗೊಳಿಸಿ ಅವರು ಮಾತನಾಡಿ, ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿರುವುದೆಲ್ಲ ಸುಳ್ಳು ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರಿಗೆ ವೇದಿಕೆಯಿಂದಲೇ ಉತ್ತರಿಸಿದರು.
ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಬಂಗಾರಪ್ಪ ಹೊಡೆಯಲು ಹೋಗಿದ್ದರು ಎಂದು ತಮ್ಮ ಆತ್ಮ ಚರಿತ್ರೆಯಲ್ಲಿ ಜನಾರ್ದನ ಪೂಜಾರಿ ಉಲ್ಲೇಖಿಸಿದ್ದರು. ಅದಕ್ಕೆ ಬಂಗಾರಪ್ಪ ಅವರ ಮಗ, ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಇತ್ತೀಚೆಗೆ ಜನಾರ್ಧನ ಪೂಜಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ತಿರುಗೇಟು ನೀಡಿದ ಪೂಜಾರಿ, ನಾವು ಬಿಲ್ಲವರು. ಸತ್ಯ ಹೇಳಲು ಭಯಪಡಲ್ಲ. ಬಂಗಾರಪ್ಪ ಅವರ ಕುರಿತು ಬರೆದಿರುವುದೆಲ್ಲ ಸತ್ಯ ಎಂದು ಹೇಳಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ನನ್ನ ಆತ್ಮ ಚರಿತ್ರೆಯಲ್ಲಿ ಸತ್ಯವನ್ನೇ ಹೇಳಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವೆ ಸುಮಾ ವಸಂತ್ ಅವರ ಬಗ್ಗೆ ಬೇಸರ ವ್ಯಕ್ತಪಡಿಸಿದ ಜನಾರ್ದನ ಪೂಜಾರಿ, ಪ್ರತಿ ವರ್ಷ ಶಿವರಾತ್ರಿ ಜಾಗರಣೆಗೆ ಸುಮಾ ವಸಂತ್ ಕುದ್ರೋಳಿಗೆ ಬರುತ್ತಿದ್ದರು. ಆದರೆ ಈ ಬಾರಿ ಸುಮಾ ವಸಂತ್ ಕುದ್ರೋಳಿಯನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಕುದ್ರೋಳಿಗೆ ಬಂದಿದ್ದರಿಂದ ಸುಮಾ ವಸಂತ್ ದೊಡ್ಡ ಹುದ್ದೆಗೇರುವಂತಾಗಿತ್ತು. ಪರಮಾತ್ಮನ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಸುಮಾ ವಸಂತ್ ಪ್ರಮಾದ ಮಾಡಿದ್ದಾರೆ ಎಂದು ಕಿಡಿ ಕಾರಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications