ಜಯಪ್ರಕಾಶ್ ಹೆಗ್ಡೆ ಯಾಕೆ ಹೀಗೆ ಹೇಳಿದ್ರು? ಚರ್ಚೆಗೆ ಕಾರಣವಾಯ್ತು ಆ ಹೇಳಿಕೆ
ಮಂಗಳೂರು, ಮೇ 02: ಬಿಜೆಪಿ ಮುಖಂಡ ಜಯಪ್ರಕಾಶ್ ಹೆಗ್ಡೆ ಅವರ ಹೇಳಿಕೆಯೊಂದು ಭಾರೀ ಕುತೂಹಲ ಮೂಡಿಸಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಪಕ್ಷದ ನಾಯಕರು ತಪ್ಪು ಮಾಡಿದರೆ ನಾನು ಅದನ್ನು ತಪ್ಪು ಎಂದು ಹೇಳುತ್ತೇನೆ. ನನ್ನನ್ನು ಇನ್ನೊಮ್ಮೆ ಉಚ್ಛಾಟಿಸಿದರೂ ಪರವಾಗಿಲ್ಲ ಎಂದು ಹೇಳಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ .
ಮಂಗಳೂರಿನಲ್ಲಿ ಬುಧವಾರ (ಮೇ.01) ಮಾಜಿ ಸಚಿವ ಬಿಎ ಮೊಹಿದಿನ್ ಅವರ ಆತ್ಮಕಥನದ ಇಂಗ್ಲಿಷ್ ಅನುವಾದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾಮಾನ್ಯವಾಗಿ ಒಂದು ಪಕ್ಷದಲ್ಲಿರುವವರು ಆ ಪಕ್ಷದ ನಾಯಕನ ಮಾತನ್ನು ಒಪ್ಪಿಕೊಳ್ಳಬೇಕು ಎಂಬ ಅಭಿಪ್ರಾಯವಿದೆ. ಆದರೆ ನಾನು ಅದನ್ನು ಒಪ್ಪುವುದಿಲ್ಲ, ಅದು ಪ್ರಜಾಪ್ರಭುತ್ವವಲ್ಲ ಎಂದರು.
ನಾನು ನಮ್ಮ ಪಕ್ಷದ ನಾಯಕರು ತಪ್ಪು ಮಾಡಿದರೆ ಅದನ್ನೂ ತಪ್ಪು ಎಂದು ಹೇಳುತ್ತೇನೆ. ತಪ್ಪನ್ನು ತಪ್ಪು ಎಂದು ಹೇಳುವುದು ತಪ್ಪು ಎಂದಾದರೆ ನಾನು ಆ ತಪ್ಪನ್ನು ಮತ್ತೆ ಮತ್ತೆ ಮಾಡುತ್ತೇನೆ. ಇದರಿಂದ ಏನು ಬೇಕಾದರೂ ಆಗಲಿ. ಹೆಚ್ಚೆಂದರೆ ನನ್ನನ್ನು ಉಚ್ಚಾಟಿಸಬಹುದು. ಇದಕ್ಕೂ ಮೊದಲು ಒಮ್ಮೆ ನನ್ನನ್ನು ಉಚ್ಚಾಟಿಸಿದ್ದಾರೆ . ಮತ್ತೊಮ್ಮೆ ಉಚ್ಚಾಟನೆ ಆಗಬಹುದು ಅಷ್ಟೇ ಎಂದು ಮಾರ್ಮಿಕವಾಗಿ ನುಡಿದರು.

ಜಯಪ್ರಕಾಶ್ ಹೆಗ್ಡೆಯವರ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳಿಗೆ ನಾಂದಿಹಾಡಿದೆ. ಜಯಪ್ರಕಾಶ್ ಹೆಗ್ಡೆ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ ಎಂಬ ಗುಸುಗುಸು ಸುದ್ದಿ ಈ ಹಿಂದೆ ಹರಿದಾಡುತ್ತಿತ್ತು. ಲೋಕಸಭಾ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅದಕ್ಕಾಗಿ ಭಾರೀ ಕಸರತ್ತು ನಡೆಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ವಂಚಿತರಾದರು.ಆದರೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications