ಮಂಗಳೂರು; ವಾಟ್ಸಪ್ ಗ್ರೂಪ್ ಮೇಲೆ ಪೊಲೀಸರ ಕಣ್ಗಾವಲು
ಮಂಗಳೂರು, ಮೇ 06: ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಯುವತಿಯರು ಬುರ್ಖಾ, ಹಿಜಾಬ್ ತೆಗೆಯದಂತೆ ವಾಟ್ಸಪ್ ಗ್ರೂಪ್ ಮೂಲಕ ಬೆದರಿಕೆ ಹಾಕಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಗ್ರೂಪ್ನಲ್ಲಿ ಸಂದೇಶ ಹರದಿಡಾಡಿದ್ದು, ಪೊಲೀಸರ ಗ್ರೂಪ್ ಮೇಲೆ ಕಣ್ಗಾವಲು ಇಟ್ಟಿದ್ದಾರೆ.
ತಾಲಿಬಾನ್ ಸಂಸ್ಕೃತಿ ಹೇರಿಕೆಯ ಪ್ರಯತ್ನದ ಭಾಗವಾಗಿ ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ವಾಟ್ಸಪ್ ಗ್ರೂಪ್ನಲ್ಲಿ ಮುಸ್ಲಿಂ ಯುವತಿಯರಿಗೆ ಬೆದರಿಕೆ ಹಾಕಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್ , ಬುರ್ಖಾ ತೆಗೆಯುವ ಯುವತಿಯರ ಮೇಲೆ ಮುಸ್ಲಿಂ ಡಿಫೆನ್ಸ್ ಫೋರ್ಸ್ ಕಣ್ಣಿಡಲಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಈ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯರ ಪೋಷಕರು ಸಹ ಎಚ್ಚರಿಕೆಯಿಂದ ಇರುವಂತೆ ಸಂದೇಶದಲ್ಲಿ ತಿಳಿಸಲಾಗಿದ್ದು, ಪಾರ್ಕ್, ಮಾಲ್, ಥಿಯೇಟರ್ ಸುತ್ತುವ ಯುವತಿಯರನ್ನು ಗುಂಪಿನ ಸಂದೇಶದಲ್ಲಿ ಗುರಿಯಾಗಿ ಇಟ್ಟುಕೊಳ್ಳಲಾಗಿದೆ.

ಪೊಲೀಸರ ಕಣ್ಗಾವಲು; ಈ ಗ್ರೂಪ್ನ ಸಂದೇಶ ವೈರಲ್ ಆಗುತ್ತಿದ್ದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸಂದೇಶದ ಮೂಲವನ್ನು ಪತ್ತೆ ಹಚ್ಚಲು ಮಂಗಳೂರು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಈ ಕುರಿತು ಮಾಹಿತಿ ನೀಡಿದ್ದು,"ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದ್ದೇವೆ. ಬುರ್ಖಾ ಧರಿಸುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಎಚ್ಚರಿಕೆ ನೀಡಲಾಗಿದೆ. ಮಾಲ್ಗಳಲ್ಲಿ ತಿರುಗಾಡುವ ಹೆಣ್ಣು ಮಕ್ಕಳ ಪೋಷಕರಿಗೂ ಎಚ್ಚರಿಕೆ ನೀಡಿದ್ದಾರೆ. ಇನ್ ಸ್ಟಾಗ್ರಾಂ ಪೇಜ್ ಮತ್ತು ವಾಟ್ಸಪ್ ಗ್ರೂಪ್ನಲ್ಲಿ ಈ ರೀತಿಯ ಸಂದೇಶ ಹಾಕಲಾಗಿದೆ" ಎಂದು ಹೇಳಿದ್ದಾರೆ.
"ಈ ಸಂದೇಶ ಯಾರು ಹಾಕಿದ್ದು ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಈ ಬಗ್ಗೆ ಯಾರೂ ಇನ್ನೂ ದೂರು ದಾಖಲು ಮಾಡಿಲ್ಲ. ಎಫ್ಐಆರ್ ಕೂಡಾ ದಾಖಲಾಗಿಲ್ಲ. ಆದರೆ, ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಈ ಬಗ್ಗೆ ದಾಖಲೆ ಮಾಡಿದ್ದೇವೆ. ವಿದೇಶಿ ಸಿಮ್ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಬರೆಯುವವರ ಮೇಲೂ ನಿಗಾ ವಹಿಸಿದ್ದೇವೆ" ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

"ಮುಸ್ಲಿಂ ಡಿಫೆನ್ಸ್ ಫೋರ್ಸ್ ವಾಟ್ಸಪ್ ಗ್ರೂಪ್ ಬಗ್ಗೆಯೇ ತನಿಖೆಗೆ ಪೊಲೀಸ್ ತಂಡ ರಚನೆ ಮಾಡಿಲ್ಲ. ಈ ಬಗ್ಗೆ ದೂರುಗಳೂ ಬಂದಿಲ್ಲ, ದೂರು ಬಂದಾಗ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಆಗುತ್ತಿದೆ. ಯಾರು ಕೆಟ್ಟ ಉದ್ದೇಶದಿಂದ ಈ ರೀತಿ ಮಾಡುತ್ತಾರೋ ಅವರ ಎಲ್ಲಾ ಮಾಹಿತಿ ದಾಖಲೆಯಾಗುತ್ತಿದೆ. ಅಗತ್ಯ ಬಿದ್ದಾಗ ದೊಡ್ಡ ಮಟ್ಟದ ಕ್ರಮ ಕೈಗೊಳ್ಳುತ್ತೇವೆ" ಎಂದು ಎಚ್ಚರಿಸಿದ್ದಾರೆ.
ಸಂದೇಶದಲ್ಲಿ ಏನಿದೆ?; ಬುರ್ಖಾ, ಹಿಜಾಬ್ ಧರಿಸಿ ಮಾಲ್, ಹೋಟೆಲ್ ಸೇರಿದಂತೆ ಸಾರ್ವಜನಿಕ ಜಾಗದಲ್ಲಿ ಹುಡುಗರೊಂದಿಗೆ ಓಡಾಡುವಂತಿಲ್ಲ ಎಂದು ಮುಸ್ಲಿಂ ಡಿಫೆನ್ಸ್ ಫೋರ್ಸ್ ಫತ್ವಾ ಹೊರಡಿಸಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಮುಸ್ಲಿಂ ಮುಖಂಡ ರಹೀಂ ಉಚ್ಚಿಲ ಈ ಸಂದೇಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. " ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರ ಕೈಗೆ ಕಲ್ಲು ಕೊಟ್ಟು ಅನೇಕರು ಜೈಲು ಸೇರಿದ್ದಾರೆ. ಈಗ ಈ ಪೇಜ್ ಅನ್ನು ಶೇರ್ ಮಾಡಿ 500ಕ್ಕೂ ಅಧಿಕ ಜನ ಜೈಲಿಗೆ ಹೋಗಲಿದ್ದಾರೆ. ಎಲ್ಲೋ ವಿದೇಶದಲ್ಲಿ ಕೂತು ಸಮಾಜ ಬಾಹಿರ ಕೆಲಸ ಮಾಡುತ್ತಾರೆ. ಮುಸ್ಲಿಂ ತರುಣಿಯರು ಹೇಗಿರಬೇಕೆಂದು ಅವರಿಗೆ ಗೊತ್ತಿದೆ" ಎಂದು ಹೇಳಿದ್ದಾರೆ.
"ಇಸ್ಲಾಂ ಕೂಡಾ ಹೇಗೆ ಬದುಕಬೇಕು ಎಂದು ಕಲಿಸಿದೆ. ಈ ತಾಲಿಬಾನಿ ಸಂಸ್ಕೃತಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನಡೆಯುವುದಿಲ್ಲ. ಭಾರತ ಸಂವಿಧಾನ ಆಧರಿತ ರಾಷ್ಟ್ರ, ಷರಿಯತ್ ಆಧರಿತ ರಾಷ್ಟ್ರ ಅಲ್ಲ. ಮಕ್ಕಳ ಬಗ್ಗೆ ಮನೆಯವರಿಗೆ ಬುದ್ಧಿವಾದ ಹೇಳಬೇಕಿಲ್ಲ. ಭಯ ಉತ್ಪಾದನೆ ಮಾಡುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕಿದೆ" ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications