Get Updates
Get notified of breaking news, exclusive insights, and must-see stories!

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್‌: ಯಾರಿದು? ಇಲ್ಲಿದೆ ಮಾಹಿತಿ

ಮಂಗಳೂರು, ಮಾರ್ಚ್‌, 13: ಲೋಕಸಭೆ ಚುನಾವಣೆಗಾಗಿ ಇತ್ತೀಚೆಗಷ್ಟೇ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಇಂದು (ಮಾರ್ಚ್‌ 13) 2ನೇ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ನೀಡಲಾಗಿದೆ. ಹಾಗಾದರೆ ಈ ಹೊಸ ಅಭ್ಯರ್ಥಿ ಯಾರು, ಹಿನ್ನೆಲೆ ಏನು ಹಾಗೂ ಇವರಿಗೇ ಟಿಕೆಟ್‌ ನೀಡಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ಇಂದು ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಈ ಪೈಕಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ಘೋಷಣೆ ಮಾಡಿದ್ದು, ಇವರು ಕೂಡ ಹೊಸಬರಾಗಿದ್ದಾರೆ.

Who is Captain Brijesh Chowta who got BJP ticket from Dakshina Kannada Lok sabha Constituency

ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹಿನ್ನೆಲೆ: ಈ ಕ್ಷೇತ್ರದಿಂದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಮಿಸ್‌ ಆಗಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ನೇಮಿಸಿತ್ತು.

ತಮ್ಮ ಕಾಲೇಜು ವರ್ಷಗಳಲ್ಲಿ ಎನ್‌ಸಿಸಿನಲ್ಲಿ ನಾಯಕತ್ವಕ್ಕಾಗಿ ಹೆಸರುವಾಸಿಯಾದ ಚೌಟಾ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಂಗಳೂರಿನ ಮಿಲಾಗ್ರೆಸ್ ಶಾಲೆಯಲ್ಲಿ ಪಡೆದರು ಮತ್ತು ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಪಿಯು ಮತ್ತು ಬಿಎಸ್‌ಸಿಯನ್ನು ಪೂರ್ಣಗೊಳಿಸಿದರು.

ತಮ್ಮ ಶಿಕ್ಷಣವನ್ನು ಮುಂದುವರೆಸುತ್ತಾ, ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM)ನಲ್ಲಿ ವ್ಯಾಸಂಗ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಸಿಸಿಯಲ್ಲಿ ಅತ್ಯುತ್ತಮ ಕೆಡೆಟ್ ಆಗಿ ಗುರುತಿಸಿಕೊಂಡಿದ್ದು, ನವದೆಹಲಿ ಗಣರಾಜ್ಯ ಪರೇಡ್‌ನಲ್ಲಿ ಭಾಗವಹಿಸಿ ಇಡೀ ದೇಶದ ಗಮನ ಸೆಳೆದಿದ್ದಾರೆ.

ಪದವಿಯ ನಂತರ, ಕ್ಯಾಪ್ಟನ್ ಚೌಟಾ ಅವರು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಎಕ್ಸಾಮಿನೇಷನ್ (CDSE) ಅನ್ನು ಉತ್ತೀರ್ಣರಾದರು ಮತ್ತು ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (OTA) ತರಬೇತಿ ಪಡೆದರು. ಅವರು ಪ್ರತಿಷ್ಠಿತ 8 ಗೂರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಅಲ್ಲದೆ ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ವಿವಿಧ ಪ್ರದೇಶಗಳಿಗೆ ಉತ್ತಮ ಕೊಡುಗೆ ನೀಡಿದ್ದಾರೆ.

ಬಳಿಕ ಸ್ವಯಂ ನಿವೃತ್ತಿಯ ನಂತರ 2011ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್ಎಸ್) ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡರು. 2013ರಲ್ಲಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು 2016ರಿಂದ 2019 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದರು.

ಕ್ಯಾಪ್ಟನ್ ಚೌಟಾ ಅವರು ಬರೀ ರಾಜಕೀಯ ಅಲ್ಲದೆ ಇದನ್ನು ಮೀರಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಯಮಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. 2015ರಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳದ ನಿಷೇಧದ ವಿರುದ್ಧದ ಪ್ರತಿಭಟನೆಯನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಅವರು, ಮಂಗಳೂರು ಕಂಬಳವನ್ನು ಸತತ ಆರು ವರ್ಷಗಳಿಂದ ಆಯೋಜಿಸಿದ್ದು, ಸ್ಥಳೀಯ ಸಂಪ್ರದಾಯಗಳಿಗೆ ಹೆಚ್ಚು ಒತ್ತು ನೀಡಿದ ಹೆಗ್ಗಳಿಗೆ ಇವರದ್ದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+