"ಬಷೀರ್ ಬಗ್ಗೆ ಮಾತನಾಡದ ಬಿಜೆಪಿಗೆ ಅಲ್ಪ ಸಂಖ್ಯಾತರ ಘಟಕ ಯಾಕೆ?"
ಮಂಗಳೂರು, ಜನವರಿ 5: ದೀಪಕ್ ರಾವ್ ಕೊಲೆಯ ವಿರುದ್ದ ಬಂದ್, ರಸ್ತೆ ತಡೆ ಅಂತ ಬೀದಿಗಿಳಿದಿರುವ ಬಿಜೆಪಿ ಮುಖಂಡರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿರುವ ಅಬ್ದುಲ್ ಬಷೀರ್ ಬಗ್ಗೆ ಯಾಕೆ ಮಾತಾಡುವುದಿಲ್ಲ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ದೀಪಕ್ ಹತ್ಯೆಗೆ ಪ್ರತೀಕಾರ ಎಂದು ರಸ್ತೆಯಲ್ಲಿ ಹೋಗುವ ಅಮಾಯಕ ಮುಸಲ್ಮಾನನ್ನು ಕಡಿದು ಕೊಲೆ ಮಾಡುವುದು ಬಿಜೆಪಿಗೆ ಸಮ್ಮತವೇ?" ಎಂದು ಪ್ತಶ್ನಿಸಿದ್ದಾರೆ.

"ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಅಮಾಯಕ ಅಬ್ದುಲ್ ಬಷೀರ್ ಅವರ ಮೇಲೆ ನಡೆದ ಮಾರಕ ದಾಳಿಯ ಬಗ್ಗೆ ಏಕೆ ಮಾತನಾಡುವುದಿಲ್ಲ? ಏಕೆ ಖಂಡಿಸುವುದಿಲ್ಲ?" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಖಂಡರುಗಳು ಜನಪ್ರತಿನಿಧಿಗಳೇ ಅಂತಾದರೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಹೇಳಿದ ಅವರು, "ಮುಸ್ಲಿಮರ ಕೊಲೆ, ಸಾವು ಇವರಿಗೆ ತಟ್ಟುವುದಿಲ್ಲ ಅಂತಾದರೆ ಬಿಜೆಪಿಯಲ್ಲಿ ಅಲ್ಪ ಸಂಖ್ಯಾತರ ಘಟಕ ಯಾಕಿದೆ?," ಎಂದು ಅಸಮಾಧಾನ ವ್ಯಕ್ತಪಡಿಸಿದರು .
"ಕಾಟಿಪಳ್ಳದ ದೀಪಕ್ ರಾವ್ ನನ್ನ ತಮ್ಮ. ಬಶೀರ್ ನನ್ನ ಅಣ್ಣ. ಇಬ್ಬರ ಮನೆಯಲ್ಲೂ ಕಣ್ಣೀರು ಸುರಿಸುತ್ತಿರುವ ಹೆಣ್ಣು ಮಕ್ಕಳು ನನ್ನ ಅಮ್ಮಂದಿರು. ಅವರೆಲ್ಲರ ಜೊತೆ ಡಿವೈಎಫ್ಐ ನಿಲ್ಲುತ್ತದೆ. ಶವ ರಾಜಕಾರಣ, ಸತ್ತ ಅಮಾಯಕರ ಕುಟುಂಬದ ಕಣ್ಣೀರಿನ ಮೇಲೆ ರಾಜಕಾರಣ ಮಾಡುವ ಬಿಜೆಪಿಯ ಮುಖಂಡರಿಗೆ ಇದು ಸಾಧ್ಯವೇ? ಜನ ಖಂಡಿತಾ ಇದನ್ನೆಲ್ಲ ಅರ್ಥ ಮಾಡಿಕೊಳ್ಳುತ್ತಾರೆ. ಮುಂಬರುವ ದಿನಗಳಲ್ಲಿ ಸೂಕ್ತ ಉತ್ತರ ನೀಡುತ್ತಾರೆ," ಎಂದು ಅವರು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications