"ಬಷೀರ್ ಬಗ್ಗೆ ಮಾತನಾಡದ ಬಿಜೆಪಿಗೆ ಅಲ್ಪ ಸಂಖ್ಯಾತರ ಘಟಕ ಯಾಕೆ?"
ಮಂಗಳೂರು, ಜನವರಿ 5: ದೀಪಕ್ ರಾವ್ ಕೊಲೆಯ ವಿರುದ್ದ ಬಂದ್, ರಸ್ತೆ ತಡೆ ಅಂತ ಬೀದಿಗಿಳಿದಿರುವ ಬಿಜೆಪಿ ಮುಖಂಡರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿರುವ ಅಬ್ದುಲ್ ಬಷೀರ್ ಬಗ್ಗೆ ಯಾಕೆ ಮಾತಾಡುವುದಿಲ್ಲ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ದೀಪಕ್ ಹತ್ಯೆಗೆ ಪ್ರತೀಕಾರ ಎಂದು ರಸ್ತೆಯಲ್ಲಿ ಹೋಗುವ ಅಮಾಯಕ ಮುಸಲ್ಮಾನನ್ನು ಕಡಿದು ಕೊಲೆ ಮಾಡುವುದು ಬಿಜೆಪಿಗೆ ಸಮ್ಮತವೇ?" ಎಂದು ಪ್ತಶ್ನಿಸಿದ್ದಾರೆ.

"ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಅಮಾಯಕ ಅಬ್ದುಲ್ ಬಷೀರ್ ಅವರ ಮೇಲೆ ನಡೆದ ಮಾರಕ ದಾಳಿಯ ಬಗ್ಗೆ ಏಕೆ ಮಾತನಾಡುವುದಿಲ್ಲ? ಏಕೆ ಖಂಡಿಸುವುದಿಲ್ಲ?" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಖಂಡರುಗಳು ಜನಪ್ರತಿನಿಧಿಗಳೇ ಅಂತಾದರೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಹೇಳಿದ ಅವರು, "ಮುಸ್ಲಿಮರ ಕೊಲೆ, ಸಾವು ಇವರಿಗೆ ತಟ್ಟುವುದಿಲ್ಲ ಅಂತಾದರೆ ಬಿಜೆಪಿಯಲ್ಲಿ ಅಲ್ಪ ಸಂಖ್ಯಾತರ ಘಟಕ ಯಾಕಿದೆ?," ಎಂದು ಅಸಮಾಧಾನ ವ್ಯಕ್ತಪಡಿಸಿದರು .
"ಕಾಟಿಪಳ್ಳದ ದೀಪಕ್ ರಾವ್ ನನ್ನ ತಮ್ಮ. ಬಶೀರ್ ನನ್ನ ಅಣ್ಣ. ಇಬ್ಬರ ಮನೆಯಲ್ಲೂ ಕಣ್ಣೀರು ಸುರಿಸುತ್ತಿರುವ ಹೆಣ್ಣು ಮಕ್ಕಳು ನನ್ನ ಅಮ್ಮಂದಿರು. ಅವರೆಲ್ಲರ ಜೊತೆ ಡಿವೈಎಫ್ಐ ನಿಲ್ಲುತ್ತದೆ. ಶವ ರಾಜಕಾರಣ, ಸತ್ತ ಅಮಾಯಕರ ಕುಟುಂಬದ ಕಣ್ಣೀರಿನ ಮೇಲೆ ರಾಜಕಾರಣ ಮಾಡುವ ಬಿಜೆಪಿಯ ಮುಖಂಡರಿಗೆ ಇದು ಸಾಧ್ಯವೇ? ಜನ ಖಂಡಿತಾ ಇದನ್ನೆಲ್ಲ ಅರ್ಥ ಮಾಡಿಕೊಳ್ಳುತ್ತಾರೆ. ಮುಂಬರುವ ದಿನಗಳಲ್ಲಿ ಸೂಕ್ತ ಉತ್ತರ ನೀಡುತ್ತಾರೆ," ಎಂದು ಅವರು ಹೇಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications