ಕಲ್ಲಡ್ಕ ಶಾಲೆಯಲ್ಲಿ ಬಿಸಿಯೂಟ, ಚರ್ಚೆಗೆ ಗ್ರಾಸವಾದ ಪ್ರಭಾಕರ ಭಟ್ ನಡೆ
ಮಂಗಳೂರು, ಜೂನ್ 1: ಕಲ್ಲಡ್ಕ ಶಾಲೆಯ ಬಿಸಿಯೂಟ ಪ್ರಕರಣ ಈಗ ಮತ್ತೇ ಸುದ್ದಿಯಲ್ಲಿದೆ. ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದ ಎರಡು ಶಾಲೆಗಳ ಅನ್ನ ಕಸಿದ ವಿಚಾರ ಈ ಹಿಂದೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ಅದೇ ಶಾಲೆಗಳ ಆಡಳಿತ ಮಂಡಳಿ ಮಧ್ಯಾಹ್ನದ ಬಿಸಿಯೂಟ 'ಅಕ್ಷರ ದಾಸೋಹ' ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಹಣದ ರೂಪದ ಅನುದಾನಕ್ಕೆ ಈ ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದ ಬಿ. ರಮಾನಾಥ ರೈ ತಡೆ ಒಡ್ಡಿದ್ದರು. ಬದಲಿಗೆ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ, ಶಾಲೆಯ ಆಡಳಿತ ಮಂಡಳಿ ಬಿಸಿಯೂಟದ ಪ್ರಸ್ತಾಪ ತಿರಸ್ಕರಿಸಿ ಸಾವಿರಾರು ಶಾಲಾ ಮಕ್ಕಳು ರಸ್ತೆಗಿಳಿದು ಸಚಿವ ರಮಾನಾಥ ರೈ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು.
ಇದಲ್ಲದೆ ಶಾಲೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಭಿಕ್ಷಾಂದೇಹಿ ಅಭಿಯಾನವನ್ನೂ ಆರಂಭಿಸಲಾಗಿತ್ತು. ಇದಕ್ಕೆ ಸಾವಿರಾರು ಜನರು ಸ್ಪಂದಿಸುವ ಮೂಲಕ ಲಕ್ಷಾಂತರ ರೂಪಾಯಿ ಸಂಗ್ರಹಿಸಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಕ್ಕಿ ಭಿಕ್ಷೆಯ ಮೂಲಕವೂ ಭಾರೀ ಪ್ರಮಾಣದಲ್ಲಿ ಅಕ್ಕಿ ಸಂಗ್ರಹಗೊಂಡಿತ್ತು.

ಗಣಿಧಣಿ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಊಟ ಕಸಿದ ವಿಚಾರವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರಮುಖ ಅಸ್ತ್ರವಾಗಿಸಿ ಬಳಸಿತ್ತು. ಚುನಾವಣೆಯಲ್ಲಿ ಸಚಿವ ರಮಾನಾಥ್ ರೈ ಸೋಲಿಗೆ ಇದೂ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ.
ಬಿಸಿ ಊಟ ನಿಲ್ಲಿಸಿ ಬಳಿಕ ನಡೆದ ಪ್ರತಿಭಟನೆ, ಆರೋಪ ಪ್ರತ್ಯಾರೋಪ , ವಾಗ್ದಾಳಿಗಳ ನಂತರ ಈಗ ರಾಜ್ಯ ಸರಕಾರ ಬದಲಾಗುತ್ತಿದ್ದಂತೆ ಅದೇ ಶಾಲಾಡಳಿತ ಮಂಡಳಿ ಬಿಸಿಯೂಟಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಗೆ ರಾಜ್ಯ ಸರಕಾರ ಒಪ್ಪಿಗೆಯನ್ನೂ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎರಡೂ ಶಾಲೆಗಳಿಗೆ ಬಿಸಿಯೂಟದ ಅಕ್ಕಿಯೂ ಪೂರೈಕೆಯಾಗಿದೆ.
ಬಿಸಿಯೂಟದ ಅನುದಾನ ನಿಲ್ಲಿಸಿದ್ದ ಅಂದಿನ ರಾಜ್ಯ ಸರಕಾರದ ವಿರುದ್ಧ ತೊಡೆ ತಟ್ಟಿದ್ದ ಶಾಲೆಯ ಆಡಳಿತ ಮಂಡಳಿ ಹಾಗೂ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಈಗ ಬಿಸಿಯೂಟಕ್ಕಾಗಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಬಿಸಿಯೂಟಕ್ಕಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಏನಾಯಿತು? ಸಂಗ್ರಹಿಸಲಾದ ಅಕ್ಕಿ ಏನಾಯಿತು? ಎಂಬ ಪ್ರಶ್ನೆ ಮೂಡಲಾರಂಭಿಸಿದೆ.
ಈ ನಡುವೆ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ್ ರೈ, ಬಿಸಿಯೂಟದ ಅನುದಾನದ ಹಣದ ಬದಲಿಗೆ ಸರಕಾರದಿಂದಲೇ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ ಈ ಪ್ರಸ್ಥಾಪವನ್ನು ಶಾಲಾ ಆಡಳಿತ ಮಂಡಳಿ ಹಾಗು ಡಾ.ಕಲ್ಲಡ್ಕ ಪ್ರಭಾಕರ ಭಟ್ ತಿರಸ್ಕರಿಸಿದ್ದೇಕೆ? ಆದರೆ ಈಗ ಏಕಾಏಕಿ ಸರಕಾರದ ಬಿಸಿಯೂಟದ ಬಗ್ಗೆ ಒಲವು ಮೂಡಿದ್ದಾದರೂ ಏಕೆ? ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications