ಕಲ್ಲಡ್ಕ ಶಾಲೆಯಲ್ಲಿ ಬಿಸಿಯೂಟ, ಚರ್ಚೆಗೆ ಗ್ರಾಸವಾದ ಪ್ರಭಾಕರ ಭಟ್ ನಡೆ
ಮಂಗಳೂರು, ಜೂನ್ 1: ಕಲ್ಲಡ್ಕ ಶಾಲೆಯ ಬಿಸಿಯೂಟ ಪ್ರಕರಣ ಈಗ ಮತ್ತೇ ಸುದ್ದಿಯಲ್ಲಿದೆ. ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದ ಎರಡು ಶಾಲೆಗಳ ಅನ್ನ ಕಸಿದ ವಿಚಾರ ಈ ಹಿಂದೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ಅದೇ ಶಾಲೆಗಳ ಆಡಳಿತ ಮಂಡಳಿ ಮಧ್ಯಾಹ್ನದ ಬಿಸಿಯೂಟ 'ಅಕ್ಷರ ದಾಸೋಹ' ನೀಡುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಹಣದ ರೂಪದ ಅನುದಾನಕ್ಕೆ ಈ ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದ ಬಿ. ರಮಾನಾಥ ರೈ ತಡೆ ಒಡ್ಡಿದ್ದರು. ಬದಲಿಗೆ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ, ಶಾಲೆಯ ಆಡಳಿತ ಮಂಡಳಿ ಬಿಸಿಯೂಟದ ಪ್ರಸ್ತಾಪ ತಿರಸ್ಕರಿಸಿ ಸಾವಿರಾರು ಶಾಲಾ ಮಕ್ಕಳು ರಸ್ತೆಗಿಳಿದು ಸಚಿವ ರಮಾನಾಥ ರೈ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು.
ಇದಲ್ಲದೆ ಶಾಲೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಭಿಕ್ಷಾಂದೇಹಿ ಅಭಿಯಾನವನ್ನೂ ಆರಂಭಿಸಲಾಗಿತ್ತು. ಇದಕ್ಕೆ ಸಾವಿರಾರು ಜನರು ಸ್ಪಂದಿಸುವ ಮೂಲಕ ಲಕ್ಷಾಂತರ ರೂಪಾಯಿ ಸಂಗ್ರಹಿಸಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಕ್ಕಿ ಭಿಕ್ಷೆಯ ಮೂಲಕವೂ ಭಾರೀ ಪ್ರಮಾಣದಲ್ಲಿ ಅಕ್ಕಿ ಸಂಗ್ರಹಗೊಂಡಿತ್ತು.

ಗಣಿಧಣಿ ಜನಾರ್ದನ ರೆಡ್ಡಿ 25 ಲಕ್ಷ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಊಟ ಕಸಿದ ವಿಚಾರವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರಮುಖ ಅಸ್ತ್ರವಾಗಿಸಿ ಬಳಸಿತ್ತು. ಚುನಾವಣೆಯಲ್ಲಿ ಸಚಿವ ರಮಾನಾಥ್ ರೈ ಸೋಲಿಗೆ ಇದೂ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ.
ಬಿಸಿ ಊಟ ನಿಲ್ಲಿಸಿ ಬಳಿಕ ನಡೆದ ಪ್ರತಿಭಟನೆ, ಆರೋಪ ಪ್ರತ್ಯಾರೋಪ , ವಾಗ್ದಾಳಿಗಳ ನಂತರ ಈಗ ರಾಜ್ಯ ಸರಕಾರ ಬದಲಾಗುತ್ತಿದ್ದಂತೆ ಅದೇ ಶಾಲಾಡಳಿತ ಮಂಡಳಿ ಬಿಸಿಯೂಟಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಗೆ ರಾಜ್ಯ ಸರಕಾರ ಒಪ್ಪಿಗೆಯನ್ನೂ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎರಡೂ ಶಾಲೆಗಳಿಗೆ ಬಿಸಿಯೂಟದ ಅಕ್ಕಿಯೂ ಪೂರೈಕೆಯಾಗಿದೆ.
ಬಿಸಿಯೂಟದ ಅನುದಾನ ನಿಲ್ಲಿಸಿದ್ದ ಅಂದಿನ ರಾಜ್ಯ ಸರಕಾರದ ವಿರುದ್ಧ ತೊಡೆ ತಟ್ಟಿದ್ದ ಶಾಲೆಯ ಆಡಳಿತ ಮಂಡಳಿ ಹಾಗೂ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಈಗ ಬಿಸಿಯೂಟಕ್ಕಾಗಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಬಿಸಿಯೂಟಕ್ಕಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಏನಾಯಿತು? ಸಂಗ್ರಹಿಸಲಾದ ಅಕ್ಕಿ ಏನಾಯಿತು? ಎಂಬ ಪ್ರಶ್ನೆ ಮೂಡಲಾರಂಭಿಸಿದೆ.
ಈ ನಡುವೆ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ್ ರೈ, ಬಿಸಿಯೂಟದ ಅನುದಾನದ ಹಣದ ಬದಲಿಗೆ ಸರಕಾರದಿಂದಲೇ ಬಿಸಿಯೂಟ ನೀಡುವ ಪ್ರಸ್ತಾಪ ಇಟ್ಟಿದ್ದರು. ಆದರೆ ಈ ಪ್ರಸ್ಥಾಪವನ್ನು ಶಾಲಾ ಆಡಳಿತ ಮಂಡಳಿ ಹಾಗು ಡಾ.ಕಲ್ಲಡ್ಕ ಪ್ರಭಾಕರ ಭಟ್ ತಿರಸ್ಕರಿಸಿದ್ದೇಕೆ? ಆದರೆ ಈಗ ಏಕಾಏಕಿ ಸರಕಾರದ ಬಿಸಿಯೂಟದ ಬಗ್ಗೆ ಒಲವು ಮೂಡಿದ್ದಾದರೂ ಏಕೆ? ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications