Get Updates
Get notified of breaking news, exclusive insights, and must-see stories!

ಎಷ್ಟೇ ಮಳೆ ಬಂದರೂ ಡಿಗ್ರಿ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಯಾಕೆ..? ಉತ್ತರ ಇಲ್ಲಿದೆ

ಮಂಗಳೂರು, ಆಗಸ್ಟ್‌ 03: ಈ ಬಾರಿಯ ಅತಿವೃಷ್ಟಿಗೆ ಕರ್ನಾಟಕದ ಕರಾವಳಿ ಭಾಗ ನಲುಗಿ ಹೋಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮೇ ತಿಂಗಳಲ್ಲಿ ನೀರಿನ ಕೊರತೆಯಿಂದ ಬಳಲಿದ್ದ ಕರಾವಳಿಯಲ್ಲೀಗ ನೀರೇ ನೀರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಾದ ಕುಮಾರಧಾರಾ ಹಾಗೂ ನೇತ್ರಾವತಿ ನದಿ ಈಗಾಗಲೇ ತುಂಬಿ ಹರಿಯುತ್ತಿದ್ದು, ನೇತ್ರಾವತಿ ನದಿ ತೀರದ ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿದೆ. ಮುಂದಿನ ದಿನಗಳಲ್ಲಿ ಈ ಭಾರೀ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ.

Why There Is No Holiday For Degree Students In Dakshina Kannada During Rainy

ಈ ಬಾರಿ ಬೇಸಿಗೆ ರಜೆ ಮುಗಿಸಿದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಳೆಗಾಲದ ರಜೆ ಆರಂಭವಾಗಿದೆ. ಎಲ್ಲೆಡೆ ಧಾರಾಕಾರವಾಗಿ ಮಳೆಯಾಗುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸುತ್ತಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅತಿ ಹೆಚ್ಚೇ ರಜೆ ನೀಡಲಾಗಿದೆ. ಆದರೆ ಈ ರಜೆ ನೀಡುವಲ್ಲಿ ಅನ್ಯಾಯ ಇದೆ ಎನ್ನುವ ಆರೋಪ ಇದೆ. ಅದೇನು ಅಂತೀರಾ ಈ ಸ್ಟೋರಿ ಓದಿ.

ರಜೆಯ ಆದೇಶ ಹೇಗಿರುತ್ತದೆ..?

ಸಾಮಾನ್ಯವಾಗಿ ಈ ರಜೆಯ ಆದೇಶವನ್ನು ಜಿಲ್ಲಾಧಿಕಾರಿಗಳ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹೊರಡಿಸಲಾಗುತ್ತದೆ. ಉದಾಹರಣೆಗೆ ಜಿಲ್ಲಾದ್ಯಂತ ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (ನಿಗದಿತ ದಿನಾಂಕ ನಮೂದಿಸಿ) ಈ ದಿನ ರಜೆ ಇರುತ್ತದೆ ಎಂದು ಆದೇಶ ಪ್ರತಿ ಹೊರಡಿಸಲಾಗುತ್ತದೆ. ಈ ಆದೇಶದಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದಿಲ್ಲ ಎನ್ನುವುದು ಸದ್ಯದ ಆರೋಪವಾಗಿದೆ ಜೊತೆಗೆ ವಿದ್ಯಾರ್ಥಿಗಳ ಪ್ರಶ್ನೆ ಆಗಿದೆ.

ಎಷ್ಟೇ ಮಳೆ ಬಂದರೂ ಡಿಗ್ರಿ ವಿದ್ಯಾರ್ಥಿಗಳಿಗೆ ಯಾಕೆ ರಜೆ ಇಲ್ಲ..? ನಾವೇನು ಸೂಪರ್ ಮ್ಯಾನ್‌ಗಳಾ..? ಎಷ್ಟೇ ಗಾಳಿ-ಮಳೆ ಇದ್ದರೂ ಕಾಲೇಜಿಗೆ ಬರಲು ಎನ್ನುವುದು ಪದವಿ ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ.

ಪದವಿ ವಿದ್ಯಾರ್ಥಿಗಳಿಗೆ ರಜೆ ಯಾಕಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ಡಿಗ್ರಿ ವಿದ್ಯಾರ್ಥಿಗಳು ಹದಿನೆಂಟು ವಯಸ್ಸಿನಲ್ಲಿ ದೇಶ ಕಾಯಲು ಯೋಧರಾಗಿ ಹೋಗುವಂತಹ ಅರ್ಹತೆ ಇರುವವರು. ನಾಳೆ ಮಳೆಯಿಂದ ಏನಾದರೂ ತೊಂದರೆಯಾಗಿ ರಕ್ಷಣಾ ತಂಡ ಬೇಕು ಅಂದರೆ ನಾವು ಡಿಗ್ರಿ ಮಕ್ಕಳನ್ನೇ ಅವಲಂಬಿರಾಗಿದ್ದೇವೆ. ಅವರು ನಮ್ಮ ಜೊತೆ ಬೆನ್ನೆಲುಬಾಗಿ ನಿಲ್ಲಬೇಕು. ಯೋಧರಾಗಿ ನಿಲ್ಲ ಬೇಕು ಎಂದು ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ. ಇದರಿಂದ ದಕ್ಷಿಣ ಕನ್ನಡ ಪದವಿ ವಿದ್ಯಾರ್ಥಿಗಳಿಗೆ ಮಳೆ ಬಂದರೆ ಯಾಕೆ ರಜೆ ಇಲ್ಲ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+