ಎಷ್ಟೇ ಮಳೆ ಬಂದರೂ ಡಿಗ್ರಿ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಯಾಕೆ..? ಉತ್ತರ ಇಲ್ಲಿದೆ
ಮಂಗಳೂರು, ಆಗಸ್ಟ್ 03: ಈ ಬಾರಿಯ ಅತಿವೃಷ್ಟಿಗೆ ಕರ್ನಾಟಕದ ಕರಾವಳಿ ಭಾಗ ನಲುಗಿ ಹೋಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮೇ ತಿಂಗಳಲ್ಲಿ ನೀರಿನ ಕೊರತೆಯಿಂದ ಬಳಲಿದ್ದ ಕರಾವಳಿಯಲ್ಲೀಗ ನೀರೇ ನೀರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಾದ ಕುಮಾರಧಾರಾ ಹಾಗೂ ನೇತ್ರಾವತಿ ನದಿ ಈಗಾಗಲೇ ತುಂಬಿ ಹರಿಯುತ್ತಿದ್ದು, ನೇತ್ರಾವತಿ ನದಿ ತೀರದ ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿದೆ. ಮುಂದಿನ ದಿನಗಳಲ್ಲಿ ಈ ಭಾರೀ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ.

ಈ ಬಾರಿ ಬೇಸಿಗೆ ರಜೆ ಮುಗಿಸಿದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಳೆಗಾಲದ ರಜೆ ಆರಂಭವಾಗಿದೆ. ಎಲ್ಲೆಡೆ ಧಾರಾಕಾರವಾಗಿ ಮಳೆಯಾಗುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸುತ್ತಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅತಿ ಹೆಚ್ಚೇ ರಜೆ ನೀಡಲಾಗಿದೆ. ಆದರೆ ಈ ರಜೆ ನೀಡುವಲ್ಲಿ ಅನ್ಯಾಯ ಇದೆ ಎನ್ನುವ ಆರೋಪ ಇದೆ. ಅದೇನು ಅಂತೀರಾ ಈ ಸ್ಟೋರಿ ಓದಿ.
ರಜೆಯ ಆದೇಶ ಹೇಗಿರುತ್ತದೆ..?
ಸಾಮಾನ್ಯವಾಗಿ ಈ ರಜೆಯ ಆದೇಶವನ್ನು ಜಿಲ್ಲಾಧಿಕಾರಿಗಳ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹೊರಡಿಸಲಾಗುತ್ತದೆ. ಉದಾಹರಣೆಗೆ ಜಿಲ್ಲಾದ್ಯಂತ ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (ನಿಗದಿತ ದಿನಾಂಕ ನಮೂದಿಸಿ) ಈ ದಿನ ರಜೆ ಇರುತ್ತದೆ ಎಂದು ಆದೇಶ ಪ್ರತಿ ಹೊರಡಿಸಲಾಗುತ್ತದೆ. ಈ ಆದೇಶದಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದಿಲ್ಲ ಎನ್ನುವುದು ಸದ್ಯದ ಆರೋಪವಾಗಿದೆ ಜೊತೆಗೆ ವಿದ್ಯಾರ್ಥಿಗಳ ಪ್ರಶ್ನೆ ಆಗಿದೆ.
ಎಷ್ಟೇ ಮಳೆ ಬಂದರೂ ಡಿಗ್ರಿ ವಿದ್ಯಾರ್ಥಿಗಳಿಗೆ ಯಾಕೆ ರಜೆ ಇಲ್ಲ..? ನಾವೇನು ಸೂಪರ್ ಮ್ಯಾನ್ಗಳಾ..? ಎಷ್ಟೇ ಗಾಳಿ-ಮಳೆ ಇದ್ದರೂ ಕಾಲೇಜಿಗೆ ಬರಲು ಎನ್ನುವುದು ಪದವಿ ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ.
ಪದವಿ ವಿದ್ಯಾರ್ಥಿಗಳಿಗೆ ರಜೆ ಯಾಕಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ಡಿಗ್ರಿ ವಿದ್ಯಾರ್ಥಿಗಳು ಹದಿನೆಂಟು ವಯಸ್ಸಿನಲ್ಲಿ ದೇಶ ಕಾಯಲು ಯೋಧರಾಗಿ ಹೋಗುವಂತಹ ಅರ್ಹತೆ ಇರುವವರು. ನಾಳೆ ಮಳೆಯಿಂದ ಏನಾದರೂ ತೊಂದರೆಯಾಗಿ ರಕ್ಷಣಾ ತಂಡ ಬೇಕು ಅಂದರೆ ನಾವು ಡಿಗ್ರಿ ಮಕ್ಕಳನ್ನೇ ಅವಲಂಬಿರಾಗಿದ್ದೇವೆ. ಅವರು ನಮ್ಮ ಜೊತೆ ಬೆನ್ನೆಲುಬಾಗಿ ನಿಲ್ಲಬೇಕು. ಯೋಧರಾಗಿ ನಿಲ್ಲ ಬೇಕು ಎಂದು ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ. ಇದರಿಂದ ದಕ್ಷಿಣ ಕನ್ನಡ ಪದವಿ ವಿದ್ಯಾರ್ಥಿಗಳಿಗೆ ಮಳೆ ಬಂದರೆ ಯಾಕೆ ರಜೆ ಇಲ್ಲ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications