ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಮುನಿಸಿಕೊಂಡ ದೈವ: ಆಗಿರುವ ತಪ್ಪೇನು..?
ಮಂಗಳೂರು, ಜೂನ್ 20: ದೈವಗಳ ನೆಲೆವೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ದೈವ ಮುನಿಸಿಕೊಂಡ ಪರಿಣಾಮ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ.
ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡಿತಾ ಇದೆ. ಆದರೆ ಮಂಗಳೂರಿನ ಹಳೆ ಬಸ್ ನಿಲ್ದಾಣದ ಬಳಿ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆಕಾರಣ ಗುಳಿಗೆ ದೈವದ ಮುನಿಸಂತೆ.. ಬಹು ಅಂತಸ್ಥಿನ ಕಾರ್ ಪಾರ್ಕಿಂಗ್ ಕಾಮಾಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿ ಇರುವ ಶರವು ಮಹಾ ಗುಳಿಗ ಅನ್ನೋದು ಸದ್ಯ ಚರ್ಚೆ ವಿಷಯ.

ಇತ್ತೀಚೆಗೆ ಶರವು ಮಹಾಗುಳಿಗನಿಗೆ ನೀಡಲಾದ ಕೋಲದಲ್ಲಿ ಗುಳಿಗ ಇದೇ ಕಾಮಾಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದೆಯಂತೆ. ಕಾಮಾಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆಯಂತೆ.
ಕಾಮಾಗಾರಿ ಆರಂಭಿಸುವ ಮೊದಲೇ ಇಲ್ಲಿನ ಗುಳಿಗನಿಗೆ ಪೂಜೆ ಸಲ್ಲಿಸಿದ ತಿಂಗಳ ಸಂಕ್ರಮಣದಂದು ಅಗೇಲು ನೀಡಲು ಇವರಿಗೆ ಸಲಹೆ ನೀಡಲಾಗಿತ್ತು. ಆದರೆ ದೈವದ ಬಗ್ಗೆ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರ ದೈವಕ್ಕೆ ಕೊಡಬೇಕಾಗಿದ್ದು ಸೇವೆ ಕೊಡಲಿಲ್ಲ ಒಂದೆಡೆಯಾದರೆ ಕನಿಷ್ಟ ದೈವಕ್ಕೆ ಕೈಮುಗಿದು ಕೆಲಸ ಆರಂಭಿಸಿಲ್ಲ. ಇದೇ ಕಾರಣದಿಂದ ಇದೀಗ ಆತನಿಗೆ ಅನಾರೋಗ್ಯ ಕೂಡ ಕಾಡಿದೆ ಎನ್ನುವ ವಿಚಾರ ಕೂಡಾ ಚರ್ಚೆಯಲ್ಲಿದೆ. ಇನ್ನೂ ಆತನ ಬದಲಿಗೆ ಗುಳಿಗನ ಕೋಲಕ್ಕೆ ಬಂದ ಆತನ ಮ್ಯಾನೇಜರ್ಗೆ ದೈವ ಆತನನ್ನೇ ಕರೆದುಕೊಂಡು ಬಾ ಎಂದು ಹೇಳಿ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಹಾಗೂ ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications