ಒಂದು ಕೋಟಿ ರೂ.ಬೇಡಿಕೆ ಇಟ್ಟು, ಪತಿಗೇ ಕೊಲೆ ಬೆದರಿಕೆ ಹಾಕಿದ ಪತ್ನಿ!
ಮಂಗಳೂರು, ಡಿಸೆಂಬರ್ 1: ತನ್ನ ಪತಿಯ ಬಳಿಯೇ ಹಣಕ್ಕೆ ಬೇಡಿಕೆ ಇಟ್ಟು, ಕೊಡದೆ ಇದ್ದರೆ ಕೊಲೆ ಮಾಡುವುದಾಗಿ ಸ್ನೇಹಿತನ ಬಳಿ ಮಹಿಳೆಯೊಬ್ಬರು ಬೆದರಿಕೆ ಹಾಕಿಸುತ್ತಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಮಣಿಪಾಲ ಮೂಲದ ಅಂಬಿಕಾ ನಾಯಕ್ ಅಕಾ ಅಂಬಿಕಾ ಪ್ರಭು ಮತ್ತು ಆಕೆಯ ಸ್ನೇಹಿತ ಮಂಡ್ಯದ ಬಿ.ಮಂಜುನಾಥ್ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ.
ಅಂಬಿಕಾ ನಾಯಕ್(42) ಅವರ ತಂದೆ ಕೆ.ವಾಸುದೇವ ಪ್ರಭು(70)ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಮೂವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಮಗಳ ಈ ಕೃತ್ಯಕ್ಕೆ ತಂದೆಯೂ ಸಮಾನ ಸಹಕಾರ ನೀಡಿದ್ದು, ಈ ಮೂವರೂ ಸೇರಿಕೊಂಡು ಅಂಬಿಕಾ ಅವರ ಪತಿ ಗಣೇಶ್ ನಾಯಕ್ ಅವರ ಬಳಿ 1 ಕೋಟಿ ರೂ. ನೀಡುವಂತೆ ಒತ್ತಾಯಿಸಿ ಪತ್ರ ಬರೆದಿದ್ದರು. ಹಣ ನೀಡದೆ ಇದ್ದಲ್ಲಿ ಗಣೇಶ್ ಅವರನ್ನೂ, ಅವರ ಕುಟುಂಬದ ಎಲ್ಲರನ್ನೂ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದರು.

ಪತಿಯೊಂದಿಗೆ ಅನ್ಯೋನ್ಯವಾಗಿದ್ದುಕೊಂಡೇ ಹೀಗೆ ಕೊಲೆ ಬೆದರಿಕೆ ಹಾಕುತ್ತಿದ್ದ ಅಂಬಿಕಾ ಅವರ ಒಳಸಂಚು ಪತಿಗೆ ತಿಳಿದಿರಲಿಲ್ಲ. ಮಂಜುನಾಥ್ ನ ಬೆದರಿಕೆಗೆ ಹೆದರಿದ ಗಣೇಶ್ ನಾಯಕ್ ಹಲವು ಬಾರಿ ಹಣ ನೀಡಿದ್ದರು. ಮಾತ್ರವಲ್ಲ, 50 ಲಕ್ಷ ರೂ.ಗಳನ್ನು ಮಂಜುನಾಥ್ ನ ಖಾತೆಗೆ ವರ್ಗಾವಣೆ ಮಾಡಿದ್ದರು. ಆ ಹಣವನ್ನು ಮಂಜುನಾಥ್, ಅಂಬಿಕಾ ಮತ್ತು ಆಕೆಯ ತಂದೆ ಹಂಚಿಕೊಂಡಿದ್ದರು. 50 ಲಕ್ಷಕ್ಕೂ ತೃಪ್ತಳಾಗದೆ ಮತ್ತೆ 50 ಲಕ್ಷ ರೂ.ಗಳನ್ನು ನೀಡುವಂತೆ ಒತ್ತಾಯಿಸುವುದಕ್ಕೆ ಆರಂಭಿಸಿದ್ದರು. ನಂತರ ಈ ಮೂವರ ಕಿರುಕುಳ ತಾಳಲಾರದೆ ಉಳ್ಳಾಲ ಪೊಲೀಸ್ ಠಾಣೆಗೆ ಗಣೇಶ್ ದೂರು ನೀದಿದ್ದರು. ಪ್ರಕರಣ ಭೇದಿಸಿದಾಗ ಪತ್ನಿಯೇ ಪ್ರಮುಖ ಆರೋಪಿ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ!
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications