ರಮಾನಾಥ ರೈ ವಿರುದ್ದ ಎಸಿಬಿ, ಲೋಕಾಯುಕ್ತಕ್ಕೆ ದೂರು : ಹರಿಕೃಷ್ಣ ಬಂಟ್ವಾಳ್
ಮಂಗಳೂರು, ನವೆಂಬರ್ 15: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸೇರಿದಂತೆ ಎಸಿಬಿಗೆ ದೂರು ನೀಡುವುದಾಗಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ತಿಳಿಸಿದರು.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಚಿವ ರಮಾನಾಥ್ ರೈ ಅವರು ಸರಕಾರಿ ಭೂಮಿಯನ್ನು ಕಬಳಿಸಿರುವ ವಿಚಾರ ಸೇರಿದಂತೆ ತಮ್ಮ ಪತ್ನಿಯ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದಿಸಿದ ಕುರಿತು ದಾಖಲೆ ಸಮೇತ ಲೋಕಾಯುಕ್ತರಿಗೆ ದೂರು ನೀಡಲಾಗುವುದು," ಎಂದು ತಿಳಿಸಿದರು.

ಸಚಿವ ರೈ ಅವರ ಎಲ್ಲಾ ಅಕ್ರಮಗಳ ಬಗ್ಗೆ ದಾಖಲೆಗಳು ತನ್ನ ಬಳಿ ಇರುವುದಾಗಿ ಹೇಳಿದ ಅವರು, "ಸಚಿವ ರೈ ಅವರ ಎಲ್ಲಾ ಅಕ್ರಮಗಳ ದಾಖಲೆಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಹಾಗು ಎಸಿಬಿ ಅಧಿಕಾರಿಗಳಿಗೆ ನೀಡುವುದಾಗಿ," ಮಾಹಿತಿ ನೀಡಿದರು.
ಸಚಿವರು ರಮಾನಾಥ ರೈ ಇತ್ತೀಚೆಗೆ ಪತ್ರಿಕಾಗೋಷ್ಠಿ ಕರೆದು ತಮ್ಮ ಅಕ್ರಮ ಆಸ್ತಿ ಗಳಿಕೆ ಕುರಿತಂತೆ ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ ಹರಿಕೃಷ್ಣ ಬಂಟ್ವಾಳ್, "ರಮಾನಾಥ್ ರೈ ಅವರ ಪತ್ನಿ ಅಕ್ರಮ ಸಕ್ರಮದ ಮೂಲಕ ಬಡವರ ಜಾಗ ಕಬಳಿಸಿದ್ದಾರೆ," ಎಂದು ದೂರಿದರು.
ಹೆಂಡತಿಯ ಹೆಸರಿನಲ್ಲಿ 3 ಎಕರೆ 4 ಸೆಂಟ್ಸ್ ಜಾಗ ಕಬಳಿಸಲಾಗಿದೆ ಎಂದು ಹೇಳಿದ ಅವರು, "ಕಳ್ಳಿಗೆಯಲ್ಲಿ ರೈ ಸರ್ವೆ ನಂ.97/01 ರಲ್ಲಿ 10 ಎಕರೆ ಕಬಳಿಸಿ ರಬ್ಬರ್ ತೋಟ ಮಾಡಿದ್ದಾರೆ," ಎಂದು ಆರೋಪಿಸಿದರು.
ಸಚಿವ ರೈ ಅವರ ಸರಕಾರಿ ಭೂ ಕಬಳಿಕೆ ಪ್ರಕರಣದ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications