ಮಂಗಳೂರು : ಶೀಘ್ರದಲ್ಲೇ ರಸ್ತೆ, ಫುಟ್ಪಾತ್ ಅಭಿವೃದ್ಧಿ
ಮಂಗಳೂರು, ಸೆಪ್ಟೆಂಬರ್ 28 : ಎರಡು ವರ್ಷದೊಳಗೆ ನಗರದ ಪ್ರಮುಖ ರಸ್ತೆಗಳ ಫುಟ್ಪಾತ್ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. 30 ಲಕ್ಷ ರೂಪಾಯಿ ವೆಚ್ಚದಲ್ಲಿ ಆನೆಗುಂಡಿ ಆಶ್ರಯ ರಸ್ತೆಯ ಕಾಂಕ್ರೀಟಿಕರಣಕ್ಕೂ ಶಾಸಕರು ಚಾಲನೆ ನೀಡಿದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕಾಂಕ್ರೀಟಿಕರಣಗೊಂಡ ಬಿಜೈ-ಆನೆಗುಂಡಿ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ನಗರದ ಪ್ರಮುಖ ರಸ್ತೆಗಳ ಫುಟ್ಪಾತ್ ಮತ್ತು ರಸ್ತೆಗಳ ಅಭಿವೃದ್ಧಿಗೆ ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು. [ಪಡೀಲ್ ರಸ್ತೆಯಲ್ಲಿ ಸವಾರರ ಪರದಾಟ]

ಆನೆಗುಂಡಿ ರಸ್ತೆಯನ್ನು 30 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೂ ಚಾಲನೆ ನೀಡಿದ ಶಾಸಕರು, ಮೊದಲು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ನಂತರ ಫುಟ್ಪಾತ್ ಅಭಿವೃದ್ಧಿಗೆ ಗಮನಹರಿಸಲಾಗುತ್ತದೆ ಎಂದರು. [ಮಂಗಳೂರು ರೈಲ್ವೆ ಸಿಬ್ಬಂದಿಗಳ ಗೋಳು ಕೇಳುವವರಾರು?]
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಸಾಲಿಯಾನ್, ದೀಪಕ್ ಪೂಜಾರಿ, ಹರಿನಾಥ್, ಕೇಶವ್ ಮಾರೋಳಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕರಿಂದ ರಸ್ತೆ ಪರಿಶೀಲನೆ : ಶಾಸಕ ಜೆ.ಆರ್. ಲೋಬೊ ಅವರು ಪಡೀಲ್ ಜಂಕ್ಷನ್ನಲ್ಲಿನ ಸಂಚಾರ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು. ತುರ್ತಾಗಿ ಅಗತ್ಯವಿರುವ ಕಾಮಗಾರಿಗಳ ಬಗ್ಗೆ ಯೋಜನೆ ರೂಪಿಸಿ ಒಂದು ವಾರದಲ್ಲಿ ಕಾಮಗಾರಿಗಳನ್ನು ಆರಂಭಿಸಲು ಸೂಚಿಸಿದರು.












Click it and Unblock the Notifications