ಟಿಪ್ಪು ಜಯಂತಿಗೆ ರಾಜ್ಯದಾದ್ಯಂತ ತಡೆ : ಪ್ರಮೋದ್ ಮುತಾಲಿಕ್
Recommended Video

ಮಂಗಳೂರು, ಅಕ್ಟೋಬರ್ 30: ರಾಜ್ಯ ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಂಘ ಪರಿವಾರದ ಸಂಘಟನೆಗಳೊಂದಿಗೆ ಸೇರಿ ಶ್ರೀರಾಮ ಸೇನೆ ರಾಜ್ಯದೆಲ್ಲೆಡೆ ತಡೆಯೊಡ್ಡಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಸ್ಲಿಂ ಮತಗಳಿಗೋಸ್ಕರ ದೇಶದ್ರೋಹಿ, ಕನ್ನಡ ದ್ರೋಹಿಯಾಗಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ಮತಾಂಧನನ್ನು ವೈಭವೀಕರಿಸಿ ರಾಜ್ಯ ಸರ್ಕಾರ ಜಯಂತಿ ಆಚರಿಸುತ್ತಿರುವುದು ದುರಂತ ಎಂದು ಅವರು ವಿಷಾದ ವ್ಯಕ್ತಪಡಿಸಿದರು .
ಟಿಪ್ಪು ಸುಲ್ತಾನ್ ಎಸಗಿದ ಕ್ರೂರತೆಯ ಬಗ್ಗೆ ಆಧಾರ, ದಾಖಲೆ ಸಹಿತ ವಿವರಿಸುವ ಕಿರು ಪುಸ್ತಕ ಒಂದು ಮುದ್ರಣವಾಗುತ್ತಿದ್ದು ಸದ್ಯದಲ್ಲೇ ಅದನ್ನು ಬಿಡುಗಡೆಗೊಳಿಸಲಾಗುವುದು ಎಂದವರು ಹೇಳಿದರು. ಈ ಕಿರು ಪುಸ್ತಕದ 1 ಲಕ್ಷ ಪ್ರತಿಗಳನ್ನು ರಾಜ್ಯದಾದ್ಯಂತ ವಿತರಿಸಲಾಗುವುದೆಂದು ಅವರು ಸ್ಪಷ್ಟಪಡಿಸಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸೂಚನೆ ನೀಡಿದ ಪ್ರಮೋದ್ ಮೊತಾಲಿಕ್, ಶೃಂಗೇರಿ, ಚಿಕ್ಕಮಗಳೂರು, ವಿಜಯಪುರ, ಬೆಳಗಾವಿ ಸೇರಿದಂತೆ ಐದು ಕ್ಷೇತ್ರಗಳನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು. ಬಿಜೆಪಿಯಿಂದ ಸ್ಪರ್ಧಿಸುವ ಇರಾದೆ ಇದೆ. ಆದರೆ ಬಿಜೆಪಿಯವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದರು.

ಶಿವಸೇನೆಯೊಂದಿಗೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆದಿದೆ. ಕರ್ನಾಟಕದಲ್ಲಿ ಶಿವಸೇನೆಯನ್ನು ಸ್ಥಾಪಿಸುವ ಬಗ್ಗೆ ಉದ್ಧವ್ ಠಾಕ್ರೆ ಅವರೊಂದಿಗೆ ಮುಂದಿನ ತಿಂಗಳು ಮಾತುಕತೆ ನಡೆಯಲಿದೆ. ಬಿಜೆಪಿ ಹಾಗು ಶಿವಸೇನೆಯೊಂದಿಗೆ ಹೊಂದಾಣಿಕೆ ಆಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ನಿಶ್ಚಿತ ಎಂದು ಅವರು ಸ್ಪಷ್ಟಪಡಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications