ಉಪ್ಪಿನಂಗಡಿಯಲ್ಲಿ ಜೀಪಿನಡಿ ಬಿದ್ದ ತಾಯಿ, ಮಗು ಪವಾಡ ಸದೃಶ್ಯ ರೀತಿಯಲ್ಲಿ ಪಾರು
ಮಂಗಳೂರು, ಫೆಬ್ರವರಿ 11:ಏಕಾಏಕಿ ಚಾಲಕನಿಲ್ಲದ ಜೀಪು ಚಲಿಸಿದ್ದರಿಂದ ಜೀಪಿನಡಿಗೆ ಬಿದ್ದ ತಾಯಿ ಹಾಗೂ ಪುಟ್ಟ ಮಗು ಅದೃಷ್ಟವಶಾತ್ ಪವಾಡ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಎಂಬಲ್ಲಿ ಭಾನುವಾರ ಸಂಜೆ (ಫೆ.10) ಈ ಘಟನೆ ನಡೆದಿದ್ದು, ಉಪ್ಪಿನಂಗಡಿಯ ಟಿಫಿನ್ ಹಾಲ್ ಹೋಟೆಲ್ ಎದುರು ಈ ಘಟನೆ ನಡೆದಿದೆ. ಹಿರೇಬಂಡಾಡಿಯ ನಿವಾಸಿ ಜಗದೀಶ್ ತಮ್ಮ ಜೀಪಿನಲ್ಲಿ ಟಿಫಿನ್ ಹಾಲ್ ಹೋಟೆಲ್ ಗೆ ಕಟ್ಟಿಗೆ ತಂದಿದ್ದರು. ಜೀಪನ್ನು ಹೋಟೆಲ್ ನ ಅಡುಗೆ ಮನೆ ಎದುರು ನಿಲ್ಲಿಸಿ, ಹೋಟೆಲ್ ಒಳಗೆ ಚಾ ಕುಡಿಯಲು ತೆರಳಿದ್ದರು. ಆದರೆ ಜೀಪ್ ನ ಕೀ ಜೀಪಲ್ಲೇ ಬಿಟ್ಟು ತೆರಳಿದ್ದರು.
ಜೀಪ್ ನಿಂದ ಕಟ್ಟಿಗೆ ಖಾಲಿ ಮಾಡಿದ ಬಳಿಕ ಹೊಟೇಲ್ ನ ಸಿಬ್ಬಂದಿಯೊಬ್ಬ ಜೀಪ್ ಗೆ ಹತ್ತಿ ಜೀಪ್ ಸ್ಟ್ರಾಟ್ ಮಾಡಿದ್ದಾನೆ. ಈ ಸಂದರ್ಭದಲ್ಲಿ ಜೀಪ್ ಒಮ್ಮಲೆ ಶರವೇಗದಲ್ಲಿ ಚಲಿಸಿದೆ. ಹೋಟೆಲ್ ಎದುರು ನಿಲ್ಲಿಸಿದ್ದ ಬೈಕ್ ಗಳಿಗೆ ಗುದ್ದಿದ ಜೀಪ್ ಅಲ್ಲೇ ಪಕ್ಕದಲ್ಲಿ ಮೆಡಿಕಲ್ ಶಾಪ್ ಗೆ ಬಂದಿದ್ದ ತಾಯಿ ಹಾಗೂ ಮಗುವಿನ ಮೇಲೆ ಹರಿದಿದೆ. ಘಟನೆಯಲ್ಲಿ ಉರುವಾಲು ಗ್ರಾಮದ ಚಂದ್ರಕಲಾ ಹಾಗೂ ಅವರ 2 ವರ್ಷದ ಮಗು ಸಣ್ಣಪುಟ್ಟ ಗಾಯಗಳಿಂದ ಪವಾಡ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಜೀಪ್ ನ ಕೀಯನ್ನು ಜೀಪ್ ನಲ್ಲೇ ಚಾಲಕ ಬಿಟ್ಟು ಹೋಗಿದ್ದು, ಈ ಘಟನೆಗೆ ಕಾರಣ ಎನ್ನಲಾಗಿದೆ. ಜೀಪ್ ನ ಅವಾಂತರದ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಅಫಘಾತದ ತೀವ್ರತೆಯನ್ನು ತಿಳಿಸುತ್ತದೆ. ಚಾಲಕನ ನಿರ್ಲಕ್ಷ್ಯ ತನಕ್ಕೆ ಸಾರ್ವಜನಿಕರು ಸೇರಿ ಆತನಿಗೆ ಹಿಗ್ಗ ಮುಗ್ಗ ಬಾರಿಸಿದ್ದಾರೆ.ಆದರೆ ಜೀಪು ಮಹಿಳೆ ಮೇಲೆ ಹರಿದು ಹೋಗುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications