ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಒಂಟಿ ಮಹಿಳೆಯ ಮೇಲೆ ದಾಳಿ ನಡೆಸಿದ ದುಷ್ಕರ್ಮಿ

|
Google Oneindia Kannada News

ಮಂಗಳೂರು, ಜುಲೈ 23: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಗೋರಿಗುಡ್ಡ ನೆಹರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಸಿಲ್ವೀಯಾ ಸಲ್ಡಾನ (49) ಎಂಬವರು ಗಾಯಗೊಂಡಿದ್ದಾರೆ.

ನಿನ್ನೆ ತಡ ರಾತ್ರಿ ಏಕಾಏಕಿ ಮನೆಗೆ ನುಗ್ಗಿದ ವ್ಯಕ್ತಿ ಸಿಲ್ವೀಯಾ ಸಲ್ಡಾನ ಅವರ ಮೇಲೆ ಚೂರಿ ಯಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಸಿಲ್ವೀಯಾ ಸಲ್ಡಾನ ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ಸಿಲ್ವೀಯಾ ಸಹಾಯಕ್ಕಾಗಿ ಕಿರುಚಿಕೊಂಡಾಗ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಮುಂಬೈ: ಊಬರ್‌ನಲ್ಲಿ ಪತ್ರಕರ್ತೆ ಮೇಲೆ ಹಲ್ಲೆ ನಡೆಸಿದ ಮಹಿಳೆ ಮುಂಬೈ: ಊಬರ್‌ನಲ್ಲಿ ಪತ್ರಕರ್ತೆ ಮೇಲೆ ಹಲ್ಲೆ ನಡೆಸಿದ ಮಹಿಳೆ

ಇರಿತದಿಂದ ಗಾಯಗೊಂಡ ಸಿಲ್ವೀಯಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯ ಜಾಗದ ತಕರಾರು ಈ ದಾಳಿಗೆ ಕಾರಣವೆಂದು ಹೆಳಲಾಗಿದ್ದು, ಪಾಂಡೇಶ್ವ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

Woman attacked in Mangaluru District

ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ‌ದಲ್ಲಿ ಒಂಟಿ ಮಹಿಳೆ ಕೊಲೆಯಾಗಿತ್ತು. ತಕ್ಷಣವೇ ಕೊಲೆ ಮಾಡಿದ‌ ಆರೋಪಿಯನ್ನು ಕಾರ್ಕಳ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರು. ಮೊಹಮ್ಮದ್ ರಿಯಾಜ್ (35) ಬಂಧಿತ ಆರೋಪಿ.

ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಅಯ್ಯಪ್ಪ ನಗರದಲ್ಲಿ ಫ್ಲೋರಿನ್ ಡಿಸೋಜ(54) ಎಂಬ ಮಹಿಳೆಯನ್ನು ಜುಲೈ 7ರ ರಾತ್ರಿ ಕತ್ತಿಯಿಂದ ಕುತ್ತಿಗೆಗೆ ತಿವಿದು ಕೊಲೆ ಮಾಡಲಾಗಿತ್ತು. ಮರುದಿನ ಬೆಳಗ್ಗೆ ಮನೆಗೆ ಬಂದ ಮಕ್ಕಳು ಎಷ್ಟೇ ಬಾಗಿಲು ಬಡಿದರೂ ತಾಯಿ‌ ಬಾಗಿಲು ತೆರೆಯದ್ದರಿಂದ ಈ ಕೊಲೆ‌ ಬೆಳಕಿಗೆ ಬಂದಿತ್ತು.

ಬಡ್ಡಿ‌ ವ್ಯವಹಾರ ಹಾಗೂ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಬಡ್ಡಿ ವ್ಯವಹಾರಕ್ಕೆಂದು ಆರೋಪಿಯಿಂದ 13ಲಕ್ಷ ಪಡೆದಿದ್ದಳೆನ್ನಲಾಗಿದ್ದು ಅದನ್ನು ಆಕೆ ಬಡ್ಡಿಗಾಗಿ ವಿನಿಯೋಗಿಸಿದ್ದಳು ಎನ್ನಲಾಗಿದೆ.

English summary
In a shocking incident a woman attacked with knife in Mangaluru. This Incident happened late night in Gorrigudda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X