Subramanya: ಮಳೆ ಅವಾಂತರ: ಭಾರೀ ಗಾಳಿಗೆ ಮರ ಬಿದ್ದು ವೃದ್ಧೆ ಸಾವು
ಮಂಗಳೂರು, ಮೇ 16: ರಾಜ್ಯದಲ್ಲಿ ಮಳೆ ಆರಂಭವಾಗುತ್ತಿದ್ದಂತೆಯೇ ಮಳೆಯ ಅವಾಂತರಗಳು ಜೊತೆ ಜೊತೆಯಲ್ಲಿ ಆರಂಭವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮಳೆಯ ಜೊತೆಗೆ ಬಿರುಗಾಳಿ ಗುಡುಗು-ಸಿಡಿಲು ಅಬ್ಬರ ಕೂಡ ಜೋರಾಗಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳೂರಿನಲ್ಲಿ ಮರ ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ.

ಮೀನಾಕ್ಷಿ ಬಸವನಮೂಲೆ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದರು. ಈ ವೇಳೆ ಏಕಾಏಕಿ ಗಾಳಿ ಮಳೆ ಆರಂಭವಾಗಿದ್ದು, ಗಾಳಿ ಮಳೆಯಿಂದ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೀನಾಕ್ಷಿ ಬಸವನಮೂಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಉಡುಪಿ: ಸಿಡಿಲು ಬಡಿದು ವ್ಯಕ್ತಿ ಸಾವು
ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಸುರೇಶ್ ಶೆಟ್ಟಿ (38) ಸಿಡಿಲು ಬಡಿದು ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಗುಡುಗು-ಸಿಡಿಲು ಸಹಿತ ಮಳೆ ಆರಂಭವಾಗಿತ್ತು. ಸುರೇಶ್ ಶೆಟ್ಟಿ ಮಳೆ ಬರುವ ವೇಳೆ ಮನೆಯ ಪಕ್ಕ ನಿಂತಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications