ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್ ಇನ್ನಿಲ್ಲ
ಮಂಗಳೂರು, ಸೆಪ್ಟೆಂಬರ್ 26 : ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತ, ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್ (86) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾರಾಮ ಭಟ್, ಮೂಡುಬಿದಿರೆಯ ಪಳಕಳದ ತಮ್ಮ ಸ್ವಗೃಹದಲ್ಲಿ ನಿನ್ನೆ ಸಂಜೆ ಕೊನೆಯುಸಿರೆಳೆದರು. ಮಕ್ಕಳ ಸಾಹಿತಿ' ಪಳಕಳ ಸೀತಾರಾಮ ಭಟ್ ಅವರು ನಾಡಿನ ಅನೇಕ ದೈನಿಕಗಳೂ ಸೇರಿದಂತೆ ಅನೇಕ ನಿಯತಕಾಲಿಕೆಗಳಲ್ಲಿ ಅವರ ಚುಟುಕುಗಳು, ಬರೆಹಗಳು ಮಕ್ಕಳ ಅಂಕಣದಲ್ಲಿ ಪ್ರಕಟವಾಗಿ ಗಮನ ಸೆಳೆದಿವೆ.

ಕಿನ್ನಿಗೋಳಿಯ 'ಯುಗಪುರುಷ' ಮೂಲಕ ಅವರ ನೂರಕ್ಕೂ ಅಧಿಕ ಕೃತಿಗಳು ಪ್ರಕಟಗೊಂಡಿರುವುದು ಅಪರೂಪದ ದಾಖಲೆ ಎಂದೇ ಹೇಳಲಾಗುತ್ತದೆ.
ತಮ್ಮ ಇಳಿವಯಸ್ಸಿನಲ್ಲೂ ನಿರಂತರ ಎಂಬಂತೆ 'ಯುಗಪುರುಷ' ಪತ್ರಿಕೆಗೆ ಚುಟುಕುಗಳನ್ನು ನೀಡಿ ಅಂಕಣಕಾರರಾಗಿಯೂ ಅವರು ಮಕ್ಕಳ ಮನೋವಿಜ್ಞಾನಿಯಾಗಿ ಗಮನಸೆಳೆದಿದ್ದರು.
1980ರಲ್ಲಿ ರಾಜ್ಯ ಸರ್ಕಾರದ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿದ್ದ ಅವರು, ನಂತರ ಅನೇಕ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಕವಿಗೋಷ್ಠಿಗಳಲ್ಲಿ ಸಕ್ರಿಯರಾಗಿ 1996ರ ಹಾಸನ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.
2004ರಲ್ಲಿ ಜಿಲ್ಲಾ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇನ್ನು 1998ರಲ್ಲಿ ಕಸಾಪದ ಮಕ್ಕಳ ಸಾಹಿತ್ಯ ಸಂಚಿಕೆಯ ಸಂಪಾದಕರಾಗಿದ್ದರು.
ಸೀತಾರಾಮ ಭಟ್ ರಿಗೆ ಸಂದ ಪ್ರಶಸ್ತಿಗಳು:
ಮಕ್ಕಳ ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ(2012) ಸೇರಿದಂತೆ ಮದ್ರಾಸ್ ಸರ್ಕಾರದ ಮಕ್ಕಳ ಸಾಹಿತ್ಯ ಗೌರವ(1955), ಕಸಾಪದ ಜಿ.ಪಿ.ರಾಜರತ್ನಂ ದತ್ತಿ ಬಹುಮಾನ(1983), ಹೊಸದಿಲ್ಲಿಯ ಬಾಲ ಶಿಕ್ಷಕ ಪರಿಷತ್ ಪ್ರಶಸ್ತಿ (1987), ರಾಜ್ಯ ಸಾಹಿತ್ಯ ಅಕಾಡಮಿಯ ಮಕ್ಕಳ ಸಾಹಿತ್ಯ ಪುರಸ್ಕಾರ (1999), ಕೊ.ಅ.ಉಡುಪ ಪ್ರಶಸ್ತಿ, ಶಿವರಾಮ ಕಾರಂತ ಪ್ರತಿಷ್ಠಾನದ ಗೌರವ (2002), ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ(2003), ಕರ್ನಾಟಕ ಸಂಘ ಶಿವಮೊಗ್ಗದ ಮಕ್ಕಳ ಸಾಹಿತ್ಯ ಪ್ರಶಸ್ತಿ (2004), ಆಳ್ವಾಸ್ ನುಡಿಸಿರಿ ಪ್ರಶಸ್ತಿ(2005), 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಅಮೃತ ಮಹೋತ್ಸವ ಸಮ್ಮೇಳನದಲ್ಲಿ ಸಮ್ಮಾನ(2009), ಕರ್ನಾಟಕ ಬಾಲ ವಿಕಾಸ ಅಕಾಡಮಿ ಗೌರವ ಪ್ರಶಸ್ತಿ (2010), ರಾಜ್ಯ ಮಟ್ಟದ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ 'ಕರ್ನಾಟಕ ಮಕ್ಕಳ ಸಾಹಿತ್ಯ ರತ್ನ' ಗೌರವಗಳು ಪಳಕಳ ಸೀತಾರಾಮ ಭಟ್ ರಿಗೆ ದೊರೆತಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications