ಯುಆರ್ ಎ ಸಾವಿಗೆ ಸಂಭ್ರಮಪಟ್ಟ ಕುಹಕಿಗಳ ಬಂಧನ
ಚಿಕ್ಕಮಗಳೂರು, ಆ.25: ಕನ್ನಡದ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯು.ಆರ್ ಅನಂತಮೂರ್ತಿ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆಯೇ ಕೆಲ ಸಮಾಜಘಾತುಕ ಶಕ್ತಿಗಳು ಪಟಾಕಿ ಹೊಡೆದು ಸಂಭ್ರಮಿಸಿದ ಘಟನೆ ಚಿಕ್ಕಮಗಳೂರು ಹಾಗೂ ಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರಿನಲ್ಲಿ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
'ನರೇಂದ್ರ ಮೋದಿ ಪ್ರಧಾನಿಯಾಗಿರುವ ಭಾರತದಲ್ಲಿ ನಾನು ಇರುವುದಿಲ್ಲ' ಎಂದು ಅನಂತಮೂರ್ತಿ ಈ ಹಿಂದೆ ಹೇಳಿಕೆ ನೀಡಿದ್ದರು. ಅದಕ್ಕೆ ಕೆಲವು ಸಂಘಟನೆಗಳು ಅನಂತಮೂರ್ತಿಯವರಿಗೆ ಪಾಕಿಸ್ತಾನದ ವಿಮಾನ ಟಿಕೆಟನ್ನು ಕಳುಹಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ. ಅನಂತಮೂರ್ತಿ ಅವರು ಮೃತರಾದ ಕೂಡಲೇ 'ದೇಶ ಬಿಡುತ್ತೇನೆ ಎಂದವರು ದೇಹ ಬಿಟ್ಟರು' ಎಂಬ ಸಂದೇಶಗಳನ್ನು ಹರಡಿಸಿದರು.

ಮೂಡಿಗೆರೆಯಲ್ಲಿ ಬಂಧನ: ಸಾಹಿತಿ ಯು.ಆರ್.ಅನಂತಮೂರ್ತಿ ನಿಧನ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಐವರು ಯುವಕರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ಬಜರಂಗದಳದ 15ಕ್ಕೂ ಹೆಚ್ಚು ಕಾರ್ಯಕರ್ತರು ಅನಂತಮೂರ್ತಿ ನಿಧನದ ಹಿನ್ನೆಲೆ ಸಂಭ್ರಮಾಚರಣೆ ನಡೆಸಿದ್ದರು.
ಇದರಿಂದ ಸ್ವಯಂಪ್ರೇರಿತವಾಗಿ ಸೆಕ್ಷನ್ 143, 147, 290, 149ರಡಿ ದೂರು ದಾಖಲಿಸಿಕೊಂಡಿದ್ದ ಮೂಡಿಗೆರೆ ಪೊಲೀಸರು ಗಿರೀಶ್, ಪ್ರವೀಣ್ ಪೂಜಾರಿ, ಭರತ್ ಬಿಜುವಳ್ಳಿ, ಹುಲಿಮನೆ ಚಂದ್ರು ಹಾಗೂ ಭರತ್ ಎಂಬುವರನ್ನ ಬಂಧಿಸಿದ್ದಾರೆ. ಇನ್ನುಳಿದ 10ಕ್ಕೂ ಹೆಚ್ಚು ಮಂದಿಗಾಗಿ ಶೋಧ ಮುಂದುವರಿಸಿದ್ದಾರೆ.
ಮಂಗಳೂರಿನ ಕದ್ರಿ ಸರ್ಕಲ್, ಮೂಡಿಗೆರೆಯ ಲಯನ್ಸ್ ಸರ್ಕಲ್ ಮತ್ತು ಚಿಕ್ಕಮಗಳೂರಿನಲ್ಲಿ ಕೆಲವು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಿದ ಘಟನೆಗೆ ರಾಜ್ಯಾದ್ಯಂತ ಭಾರೀ ಟೀಕೆಯ ಮಹಾಪೂರವೇ ಹರಿದುಬಂದಿತ್ತು.
ಮಂಗಳೂರಿನ ಪೊಲೀಸ್ ಮುಖ್ಯಸ್ಥ ಹಿತೇಂದ್ರ ಅವರು ಮಂಗಳೂರು ಪೂರ್ವ ವಿಭಾಗದ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಅವರ ತಂಡ ಮಾಧ್ಯಮಗಳ ವರದಿ ಆಧಾರಿಸಿ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಗುರುತಿಸಲಾಗಿದೆ. ಶೀಘ್ರದಲ್ಲೆ ಬಂಧಿಸಲಾಗುವುದು ಎಂದಿದ್ದಾರೆ. ಆದರೆ, ಸ್ಥಳೀಯ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಅವರು ಮಾತ್ರ ಈ ರೀತಿ ಘಟನೆ ನಡೆದಿಲ್ಲ ಎಂದಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications