ಪುತ್ತೂರಿನ ಪಂಚಮುಖಿ ಆಂಜನೇಯನ ಕೃಪೆಯಿಂದ ಯದುವೀರ್ ಗೆ ಗಂಡು ಮಗು?
Recommended Video

ಮಂಗಳೂರು, ಡಿಸೆಂಬರ್ 7: ಮೈಸೂರು ಯದುವಂಶಕ್ಕೆ ಯುವರಾಜನ ಆಗಮನವಾಗಿದೆ. ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಸಂತಾನ ಪ್ರಾಪ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಯದುವಂಶ, ಅಲಮೇಲಮ್ಮನ ಶಾಪದಿಂದ ಮುಕ್ತಗೊಂಡಿದೆ ಎಂಬ ಚರ್ಚೆ ಆರಂಭಗೊಂಡಿದೆ.
ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಸಂತಾನ ಪ್ರಾಪ್ತಿಗೆ ಹನುಮನ ಕೃಪೆ ಕಾರಣ ಎಂಬ ಮಾತು ಕೇಳಿಬರುತ್ತಿದೆ. ಪುತ್ತೂರಿನ ಈಶ್ವರಮಂಗಲದಲ್ಲಿರುವ ಹನುಮಗಿರಿ ಶ್ರೀ ಕ್ಷೇತ್ರದ ಪಂಚಮುಖಿ ಆಂಜನೇಯನ ಕೃಪೆಯಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಪುತ್ರ ಸಂತಾನ ಪ್ರಾಪ್ತವಾಗಿದೆ ಎಂದು ಹೇಳಲಾಗಿದೆ.

ಆಂಜನೇಯನ ಪರಮ ಭಕ್ತ ಯದುವೀರ್
ಅಂಜನೇಯನ ಪರಮ ಭಕ್ತರಾಗಿರುವ ಯದುವೀರ್ ಕೃಷ್ಣದತ್ತ ಒಡೆಯರ್ ಕಳೆದ ತಿಂಗಳು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದರು. ವಿಶೇಷ ಪೂಜೆ ಸಂದರ್ಭದಲ್ಲಿ ಗಂಡು ಮಗುವಿನ ಬೇಡಿಕೆ ಇಟ್ಟಿದ್ದರು . ಪೂಜೆಯ ಫಲವಾಗಿ ಯದುವೀರ್ ಅವರ ಇಷ್ಟಾರ್ಥ ಈಡೇರಿದಂತಾಗಿದೆ.

ನವೆಂಬರ್ 2ರಂದು ವಿಶೇಷ ಪೂಜೆ
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹನುಮಗಿರಿ ಮಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಕಳೆದ ನವೆಂಬರ್ 2 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಉಪವಾಸ ವ್ರತದಲ್ಲೇ ಪೂಜೆ
ಶ್ರೀ ಕೋದಂಡರಾಮನ ಪ್ರತಿಷ್ಠಾ ಮಹೋತ್ಸವ ದಲ್ಲಿ ಭಾಗಿಯಾಗಿದ್ದ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ಅಲ್ಲಿಂದ ಬಂದು ಪಂಚಮುಖಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಕ್ಷೇತ್ರಕ್ಕೆ ಬರುವಾಗಲೇ ಉಪವಾಸ ವ್ರತದಲ್ಲಿದ್ದ ಯದುವೀರ್ ಪೂಜೆಯ ಬಳಿಕ ಕ್ಷೇತ್ರದಲ್ಲಿ ಉಪಾಹಾರ ಸೇವಿಸಿದ್ದರು.

ಗಂಡು ಮಗುವಿಗೆ ಜನ್ಮ ನೀಡಿದ ತ್ರಿಷಿಕಾ
ಪೂಜೆ ಪುನಸ್ಕಾರಗಳ ಫಲ ಎಂಬಂತೆ ಮೈಸೂರು ಯುವರಾಣಿ ತ್ರಿಷಿಕಾ ಕುಮಾರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದಕ್ಕೆ ಪುತ್ತೂರಿನ ಹನುಮಗಿರಿ ಶ್ರೀ ಕ್ಷೇತ್ರದ ಪಂಚಮುಖಿ ಆಂಜನೇಯನ ಕೃಪೆ ಕಾರಣ ಎಂದು ಹೇಳಲಾಗುತ್ತಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications