ಯಕ್ಷಧ್ರುವ ಪಟ್ಲ ಸಂಭ್ರಮ: ಕುಬಣೂರುಗೆ ಮರಣೋತ್ತರ ಪ್ರಶಸ್ತಿ

ಮಂಗಳೂರು, ಮೇ 17: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೇ 27ರಂದು ಯಕ್ಷಧ್ರುವ ಪಟ್ಲ ಸಂಭ್ರವನ್ನು ಮಂಗಳೂರಿನ ಆಡ್ಯಾರ್ ಗಾರ್ಡನ್‌ನಲ್ಲಿ ಹಮ್ಮಿಕೊಂಡಿದೆ. ಅದರ ಪೂರ್ವಭಾವಿ ಸಭೆಯು ಓಶಿಯನ್ ಪರ್ಲ್ಸ್ ಹೋಟೆಲ್‌ನಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ರಚಿಸಿರುವ 30 ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿಕೊಡಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಪ್ರಶಸ್ತಿ, ಯಕ್ಷಧ್ರುವ ಕಲಾ ಗೌರವ ಪ್ರಶಸ್ತಿಯ ಜತೆಗೆ ಈ ವರ್ಷ ಮರಣೋತ್ತರ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಯಿತು.

ಕಳೆದ ವರ್ಷ ಕಟೀಲು ನಾಲ್ಕನೇ ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದ ಕುಬಣೂರು ಶ್ರೀಧರ ರಾವ್ ನಿಧನರಾಗಿದ್ದು, ಇದೀಗ ಅವರ ಸ್ಮರಣಾರ್ಥ ಅವರ ಕುಟುಂಬಸ್ಥರಿಗೆ ಮರಣೋತ್ತರ ಪ್ರಶಸ್ತಿಯ ಜತೆಗೆ 25 ಸಾವಿರ ರೂ ನೀಡಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

Yaksha Druva award to Kubanuru Sridhar Rao

ಸಭೆಯಲ್ಲಿ ಕತಾರ್ ಘಟಕದ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲ್, ಪ್ರಭಾಕರ ಜೋಶಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ , ಸವಣೂರು ಸೀತಾರಾಮ ರೈ, ಭುಜಬಲಿ, ನಿತ್ಯಾನಂದ ಶೆಟ್ಟಿ, ಡಾ. ಮನುರಾವ್, ಸಿ.ಎ ಸುದೇಶ್ ಕುಮಾರ್, ಆರತಿ ಆಳ್ವ ,ಜಯಶೆಟ್ಟಿ ಪಡುಬಿದ್ರಿ, ಸತೀಶ್ ಶಟ್ಟಿ ವಾಮಂಜೂರು, ಪ್ರೇಮನಾಥ್ ಶೆಟ್ಟಿ ಪಡುಬಿದ್ರಿ, ಗೋಪಾಲ ಶೆಟ್ಟಿ ಕಾರ್ಕಳ, ರಾಜೀವ್ ಪೂಜಾರಿ ಕೈಕಂಬ, ಜಗದೀಶ್ ಶೆಟ್ಟಿ ಉಪ್ಪಿನಂಗಡಿ ಪ್ರದೀಪ್ ಆಳ್ವ , ಗಿರೀಶ್ ಶೆಟ್ಟಿ ಕಟೀಲ್, ಪಿ.ಡಿ. ಶೆಟ್ಟಿ, ಸಂತೋಷ್ ಶೆಟ್ಟಿ ಸುರತ್ಕಲ್ ಹಾಗೂ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರ್ವಹಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+