ಯಕ್ಷಗಾನದ ದಂತಕತೆ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ.!
ಮಂಗಳೂರು, ಅಕ್ಟೋಬರ್, 31: ಯಕ್ಷಗಾನದಲ್ಲಿ "ನಳದಮಯಂತಿ" ಪ್ರಸಂಗದ ಬಾಹುಕ ಹಾಗೂ ಪಾಪಣ್ಣ ವಿಜಯ ಗುಣಸುಂದರಿಯ "ಪಾಪಣ್ಣ" ಪಾತ್ರಕ್ಕೆ ಹೊಸ ಆಯಾಮ ನೀಡಿದ ಯಕ್ಷಗಾನದ ದಂತಕತೆ ಪೆರುವೋಡಿ ನಾರಾಯಣ ಭಟ್ (96) ಇಂದು ಇಹಲೋಕದ ಯಾತ್ರೆ ಮುಗಿಸಿ ಕಲಾದೇವಿಯ ಮಡಿಲು ಸೇರಿದ್ದಾರೆ.
ಒಂದು ಶತಮಾನದ ಯಕ್ಷಗಾನ ಚರಿತ್ರೆಯ ಸಾಕ್ಷಿಯಂತೆ ಬದುಕಿದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ಟರು ಧರ್ಮಸ್ಥಳ ಮೇಳದಲ್ಲಿ ಕುರಿಯ ವಿಠಲ ಶಾಸ್ತ್ರಿಗಳು, ಅಗರಿ ಶ್ರೀನಿವಾಸ ಭಾಗವತರು ಮೊದಲಾದ ದಿಗ್ಗಜಗಳೊಂದಿಗೆ ಒಡನಾಡಿದವರು. ಪೆರುವೋಡಿ ನಾರಾಯಣ ಭಟ್ಟರಂತೆ ಯಕ್ಷಗಾನದಲ್ಲಿ ಹಾಸ್ಯಪಾತ್ರದಲ್ಲಿ ಭಾಷೆಯನ್ನು ಸೊಗಸಾಗಿ ಬಳಸಿದವರು ವಿರಳವೇ ಎನ್ನಬಹುದು. ಹಾಸ್ಯಗಾರರೆಂದು ಪ್ರಸಿದ್ಧರಾದರೂ ಗಂಭೀರ ಪೋಷಕ ಪಾತ್ರಗಳ ಪ್ರಸ್ತುತಿಗೂ ಅವರು ಹೆಸರಾಗಿದ್ದರು.

ಪುತ್ತೂರು ನಾರಾಯಣ ಹೆಗಡೆ, ಎಂಪೆಕಟ್ಟೆ ರಾಮಯ್ಯ ರೈಯಂಥವರು, ಹಾರಾಡಿ ರಾಮ ಗಾಣಿಗ, ಕೊಕ್ಕರ್ಣೆ ನರಸಿಂಹ ಕಮ್ತಿ, ಕುರಿಯ ವಿಠಲ ಶಾಸ್ತ್ರಿ, ಅಳಿಕೆ ರಾಮಯ ರೈ, ಕಡಂದೇಲು ಪುರುಷೋತ್ತಮ ಭಟ್ಟ, ಕೋಳ್ಯೂರು ರಾಮಚಂದ್ರ ರಾವ್ ಮೊದಲಾದವರ ಜೊತೆಗೆ ವೇಷ ಮಾಡಿದವರು. ಪೆರುವೋಡಿಯವರ ನಾರದನ ಪಾತ್ರ ಮೆಚ್ಚುಗೆಗೆ ಪಾತ್ರವಾಗಿತ್ತು. ಬಡಗಿನ ಸಾಲಿಗ್ರಾಮ ಮೇಳದಲ್ಲಿ ಗುಂಡ್ಮಿ ಕಾಳಿಂಗ ನಾವಡ, ಚಿಟ್ಟಾಣಿ ರಾಮಚಂದ್ರ ಹೆಗಡೆ ಮೊದಲಾದವರೊಂದಿಗೆ ತಿರುಗಾಟ ನಡೆಸಿದ್ದರು.
ಸುರತ್ಕಲ್ ಮೇಳದಲ್ಲಿ ಜಯಭೇರಿ ಭಾರಿಸಿದ್ದ 'ಪಾಪಣ್ಣ ವಿಜಯ'ದ ಪಾಪಣ್ಣನ ಪಾತ್ರದಲ್ಲಿ ಇವರನ್ನು ಮೀರಿಸಿದವರು ಇವತ್ತಿನವರೆಗೂ ಇಲ್ಲ. ಬಾಹುಕನ ಪಾತ್ರಕ್ಕೆ ಹೊಸ ಭಾವನಾತ್ಮಕ ಆಯಾಮವನ್ನು ಕೊಟ್ಟಿದ್ದರು. ಕದ್ರಿ ಮೇಳದಲ್ಲಿ 'ಗೆಜ್ಜೆದ ಪೂಜೆ' ಪ್ರಸಂಗದ ಬೇಚನ ಪಾತ್ರಚಿತ್ರಣ ಇವತ್ತಿಗೂ ಸ್ಮರಣೀಯ. ಬಪ್ಪನಾಡು ಮೇಳದಲ್ಲಿ ರಾಮದಾಸ ಸಾಮಗರ ಕೈಲಾಸ ಶಾಸ್ತ್ರಿ ಪಾತ್ರಕ್ಕೆ ಮಾಣಿಯಾಗಿ ಜನಪ್ರಿಯರಾಗಿದ್ದರು. ಪೆ
ರುವೋಡಿ ನಾರಾಯಣ ಭಟ್ಟರ ಆತ್ಮಕಥನವನ್ನು ನಾ. ಕಾರಂತ ಪೆರಾಜೆಯವರು ನಿರೂಪಿಸಿದ್ದು ಅದು ಪ್ರಕಟವಾಗಿದೆ. ಪೆರುವೋಡಿ ನಾರಾಯಣ ಭಟ್ಟರ ನಿಧನದೊಂದಿಗೆ ಯಕ್ಷಗಾನದಲ್ಲಿ 'ಹಾಸ್ಯರಸ'ದ ಘನತೆಯ ಅಭಿವ್ಯಕ್ತಿಯ ಮಾದರಿಯೊಂದು ಮರೆಗೆ ಸರಿದಂತಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications