ಯೇಸುಕ್ರಿಸ್ತರ ಜೀವನಚರಿತ್ರೆಗೆ ಯಕ್ಷಗಾನದ ಟಚ್ ನೀಡಿದ ಕೇಶವಯ್ಯಾ
ಈವರೆಗೆ ಬೈಬಲ್ನಿಂದ ಹಿಡಿದು ನಾಟಕ, ಚಲನಚಿತ್ರ, ಹಾಡುಗಳು ಹೀಗೆ ವಿವಿಧ ಕಲಾ ಪ್ರಕಾರಗಳಿಗೆ ಸೀಮಿತವಾಗಿದ್ದ ಯೇಸುಕ್ರಿಸ್ತನ ಜೀವನಚರಿತ್ರೆಗೆ ಯಕ್ಷಗಾನದ ಟಚ್ ದೊರೆತಿದೆ. ಮುಳಿಯ ಕೇಶವಯ್ಯ ಈ ಯಕ್ಷಗಾನ ಪ್ರಸಂಗ ಬರೆದಿದ್ದಾರೆ.
ಮಂಗಳೂರು, ಮೇ 19: ದಕ್ಷಿಣ ಕನ್ನಡದ ಗಂಡುಕಲೆ ಎಂದರೆ ಯಕ್ಷಗಾನ. ಇದರ ಮೂಲಕ ಹಲವಾರು ಪವರಾಣಿಕ ಕಥೆಗಳನ್ನು ಯಕ್ಷ ಪ್ರಿಯರಿಗೆ ತಲುಪಿದೆ. ಆದರೆ ಈಗ ಇದೇ ಕಲೆ ಹೊಸತನವೊಂದಕ್ಕೆ ಕೈ ಹಾಕಿ ಯಶಸ್ವಿಯಾಗಿದೆ.
ಈವರೆಗೆ ಬೈಬಲ್ನಿಂದ ಹಿಡಿದು ನಾಟಕ, ಚಲನಚಿತ್ರ, ಹಾಡುಗಳು ಹೀಗೆ ವಿವಿಧ ಕಲಾ ಪ್ರಕಾರಗಳಿಗೆ ಸೀಮಿತವಾಗಿದ್ದ ಯೇಸುಕ್ರಿಸ್ತನ ಜೀವನಚರಿತ್ರೆಗೆ ಯಕ್ಷಗಾನದ ಟಚ್ ದೊರೆತಿದೆ. ಮುಳಿಯ ಕೇಶವಯ್ಯ ಎಂಬುವವರು ಮಹಾನ್ ಚೇತನ ಯೇಸು ಕ್ರಿಸ್ತ ಮಹಾತ್ಮೆ ಎಂಬ ಯಕ್ಷಗಾನ ಪ್ರಸಂಗ ಬರೆದಿದ್ದಾರೆ.[ಅಂಧರ ಭವಿಷ್ಯ ಕಟ್ಟುತ್ತಿರುವ 'ಅಮೃತ ಬಿಂದು']

ಸುಮಾರು ನಾಲ್ಕು ದಶಕಗಳ ಹಿಂದೆಯೇ ಈ ಬಗ್ಗೆ ಪುಸ್ತಕ ರಚಿಸಿದ್ದರು. ಸದ್ಯ ಅದನ್ನು ಪರಿಷ್ಕರಿಸಿ ಅದಕ್ಕೆ ಸಂಭಾಷಣೆಗಳನ್ನು ಸೇರಿಸಿದ್ದಾರೆ. ಇದೀಗ ಯಕ್ಷಪ್ರಿಯರಿಗೆ ಯಕ್ಷಗಾನದ ಮೂಲಕ ಯೇಸುಕ್ರಿಸ್ತರ ಜೀವನ ಚರಿತ್ರೆಯನ್ನು ಉಣಬಡಿಸುವ ಕೆಲಸವನ್ನು ಮೇ 27 ಸಂಜೆ 3 ಗಂಟೆಗೆ ಮಂಗಳೂರಿನ ಡಾನ್ಬೋಸ್ಕೋ ಹಾಲ್ನಲ್ಲಿ ಏರ್ಪಡಿಸಿದ್ದಾರೆ.
ಈ ಮೂಲಕ ಕ್ರೈಸ್ತ ಸಮುದಾಯದ ಜನರನ್ನು ಯಕ್ಷಗಾನ ಕಲೆಯ ಕಡೆಗೆ ಕರೆದೊಯ್ಯುವುದು ಇದರ ಉದ್ದೇಶ. ಈ ಮೂಲಕ ಯಕ್ಷಗಾನಕ್ಕೆ ಹೊಸ ಭಾಷ್ಯ ಬರೆಯಲು ಮುಳಿಯ ಕೇಶವಯ್ಯಾ ಮುಂದಾಗಿದ್ದಾರೆ.
ಇಂಗ್ಲೀಷ್ಗೆ ಭಾಷಾಂತರ
ಯೇಸುಕ್ರಿಸ್ತನ ಜೀವನಚರಿತ್ರೆಯನ್ನು ಯಕ್ಷಗಾನವೆಂಬ ಕಲಾರೂಪಕ್ಕೆ ತರುವುದು ಕಷ್ಟದ ಕೆಲಸವೇ. ಅದನ್ನು ಕೇಶವಯ್ಯ ಮಾಡಿ ತೋರಿಸಿದ್ದಾರೆ. ಇದಕ್ಕೆ ಅವರು ಬೈಬಲ್ ಹಾಗೂ ಇತರ ಪುಸ್ತಕಗಳನ್ನು ಅಧ್ಯಯನ ನಡೆಸಿದ್ದಾರೆ.

ಸುಮಾರು 123 ಪುಟಗಳಿರುವ "ಮಹಾನ್ ಚೇತನ ಯೇಸು ಕ್ರಿಸ್ತ ಮಹಾತ್ಮೆ" ಪುಸ್ತಕವು ಇಂಗ್ಲೀಷ್ ಭಾಷೆಗೆ ಡಾ.ಮುಳಿಯಾಲ್ ಎಂಬವರು ಭಾಷಾಂತರಿಸಿದ್ದಾರೆ.
ಈ ಬಗ್ಗೆ ಖ್ಯಾತ ಸಾಹಿತಿ ಡಾ.ಆನಂದರಾಮ್ ಉಪಾಧ್ಯಾಯ ಹೇಳುವುದು ಹೀಗೆ, "ಮುಳಿಯ ಕೇಶವಯ್ಯ ತಮ್ಮ 80ರ ಇಳಿವಯಸ್ಸಿನಲ್ಲೂ ಯೇಸುಕ್ರಿಸ್ತರ ಬಗ್ಗೆ ಯಕ್ಷಗಾನ ಪ್ರಸಂಗ ಸಿದ್ದಪಡಿಸಿರುವುದು ಸಾಧನೆಯೇ ಸರಿ. ಇದು ಅತ್ಯಂತ ತ್ರಾಸದಾಯಕ ಕೆಲಸ. ಇದು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ" ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಪರಮಪೂಜ್ಯ ಡಾ. ಅಲೋಶಿಯಸ್ ಪಾವ್ಲ್ ಡಿ'ಸೋಜ ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ಕರ್ನಾಟಕ ಥಿಯೊಲಾಜಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹನಿ ಕಾಬ್ರಲ್, ಆಲಂಗಾರು ಚರ್ಚ್ನ ಧರ್ಮಗುರುಗಳಾದ ಫಾ.ಮಾರ್ಕ್ ವಾಲ್ಡರ್ ಹಾಗೂ ಮಂಗಳೂರು ವಿವಿಯ ಕನ್ನಡ ಉಪನ್ಯಾಸಕ ಪ್ರೊ. ಕೆ. ಚಿನ್ನಪ್ಪ ಗೌಡ ಉಪಸ್ಥಿತರಿರುವರು.
{promotion-urls}
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications