ಮಂಗಳೂರು: ಯಾಸಿನ್ ರೂಮಿನಲ್ಲಿ ಭಾರಿ ಸ್ಫೋಟಕ ಪತ್ತೆ
ನವದೆಹಲಿ, ಸೆ. 16: ಮಂಗಳೂರು ಬೆಚ್ಚಿಬಿದ್ದಿದೆ. ಇಂಡಿಯನ್ ಮುಜಾಹಿದ್ದೀನ್ (IM) ಭಯೋತ್ಪಾದಕ ಸಂಘಟನೆಯ ಸೂತ್ರಧಾರಿ ಯಾಸಿನ್ ಭಟ್ಕಳ ಈ ಹಿಂದೆ ತಂಗಿದ್ದ ನಗರದ ಅಪಾರ್ಟ್ ಮೆಂಟಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ರಾಷ್ಟ್ರೀಯ ತನಿಖಾ ದಳವು (NIA) ವಶಪಡಿಸಿಕೊಂಡಿದೆ.
NIA, ಇತ್ತೀಚೆಗೆ (ಆಗಸ್ಟ್ 28ರಂದು) ಯಾಸಿನ್ ಭಟ್ಕಳ ಮತ್ತು ಅವನ ಪರಮಾಪ್ತ ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ. ಕಳೆದ 17 ದಿನಗಳಿಂದ ಎನ್ಐಎ ವಶದಲ್ಲಿರುವ ಭಟ್ಕಳ ಮತ್ತು ಹಡ್ಡಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರ ಹಾಕುತ್ತಿದ್ದಾರೆ.

ವಿಚಾರಣೆ ವೇಳೆ ಪಾತಕಿಗಳು ನೀಡಿದ ಮಹತ್ವದ ಸುಳಿವನ್ನು ಬೆಂಬತ್ತಿ ಮಂಗಳೂರಿಗೆ ಬಂದಿಳಿದ NIA ಅಧಿಕಾರಿಗಳು ಕಳೆದ ವಾರ ಯಾಸಿನ್ ಭಟ್ಕಳ ಮಂಗಳೂರಿನ ಚೆಂಬೆಗುಡ್ಡದಲ್ಲಿರುವ ಝೆಪಿಯರ್ ಹೈಟ್ಸ್ ಅಪಾರ್ಟ್ ಮೆಂಟ್ ನಲ್ಲಿ ತಂಗಿದ್ದ 301 ಸಂಖ್ಯೆಯ ಕೊಠಡಿಯನ್ನು ತೆರೆದು ನೋಡಿದಾಗ ಈ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಯಾಸಿನ್ ಭಟ್ಕಳ ತಂಗಿದ್ದ ಅಪಾರ್ಟ್ ಮೆಂಟ್ ಕೊಠಡಿಯಲ್ಲಿ 90 ಸುಧಾರಿತ, ಜೀವಂತ ಬಾಂಬುಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಗುಪ್ತಚರ ಇಲಾಖೆಗಳು ತಿಳಿಸಿವೆ. ನೆಪ ಮಾತ್ರಕ್ಕೆ ಝೆಪಿಯರ್ ಹೈಟ್ಸ್ನಲ್ಲಿ ಉಳಿದಿದ್ದ ಈ ಶಂಕಿತರು ತಮ್ಮ ಮನೆಯನ್ನು ಉಗ್ರಗಾಮಿ ಚಟುವಟಿಕೆಗಳ ಪ್ರಯೋಗಾಲಯ ಮಾಡಿಕೊಂಡಿದ್ದರು. ಸೆಪ್ಟೆಂಬರ್ 6ರಂದು ಮಂಗಳೂರಿಗೆ ದೆಹಲಿಯಿಂದ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಈ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ ಮತ್ತು ಯಾಸಿನ್ ಭಟ್ಕಳ ತಂಗಿದ್ದ ಕೊಠಡಿಯಲ್ಲಿ ಟೈಮರುಗಳು, ಬ್ಯಾಟರಿಗಳು, ಡಿನೋಟರ್ಟ್, ಡಿಜಿಟಲ್ ವಾಚ್, ಸಿ.ಡಿ., ಪ್ಲಾಫಿಗಳು, ಕಂಪ್ಯೂಟರ್ ಸೇರಿದಂತೆ ಪ್ರಮುಖ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸುಮಾರು 3 ತಿಂಗಳ ಕಾಲ ಈ ಅಪಾರ್ಟ್ ಮೆಂಟಿನಲ್ಲಿ ಉಳಿದುಕೊಂಡಿದ್ದ ಈ ಇಬ್ಬರು ಇಲ್ಲಿಂದಲೇ ಬಾಂಬುಗಳನ್ನು ತಯಾರಿಸಿ ದೇಶದ ನಾನಾ ಭಾಗಗಳಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.
ಅಮೋನಿಯಂ ನೈಟ್ರೆಟ್ನಿಂದ ತಯಾರು ಮಾಡುತ್ತಿದ್ದ ಬಾಂಬುಗಳನ್ನೇ 2008ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸರಣಿ ಸ್ಫೋಟಕ್ಕೂ ಬಳಸಲಾಗಿತ್ತು.
ಹೈದರಾಬಾದ್ನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಅವಳಿ ಬಾಂಬ್, ಮಹಾರಾಷ್ಟ್ರದ ಪುಣೆಯ ಜರ್ಮನ್ ಬೇಕರಿ, ಮುಂಬೈನ ದಾದರ್ ಹವೇಲಿ, ಸೂರತ್, ಅಹಮದಾಬಾದ್, ದೆಹಲಿ ಸೇರಿದಂತೆ 2006 ರಿಂದ ಇತ್ತೀಚೆಗೆ ದೇಶದ ವಿವಿಧೆಡೆ ಸಂಭವಿಸಿದ ಸ್ಫೋಟಗಳಲ್ಲಿ ಮಂಗಳೂರಿನಿಂದ ತಯಾರಾದ ಈ ಬಾಂಬುಗಳನ್ನು ಭಟ್ಕಳ್ ಮತ್ತು ಹಡ್ಡಿ ಬಳಸಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications