'ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರಕ್ಕೆ ಎಟಿಎಂ ಇದ್ದಂತೆ'
ಮಂಗಳೂರು, ಜೂನ್ 03: ಜಿಂದಾಲ್ ಕಂಪನಿಗೆ 3666 ಎಕರೆ ಭೂಮಿಯನ್ನು ಪುಡಿಗಾಸಿಗೆ ಮಾರಾಟ ಮಾಡುವ ಅಗತ್ಯವಿದೆಯೇ? ಈ ಪ್ರಕರಣದಲ್ಲಿ ಸಚಿವ ಸಂಪುಟದ ಮೇಲೆ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಿಂದಾಲ್ ಕಂಪನಿ 1500 ಕೋಟಿ ರೂಪಾಯಿ ಬಾಕಿ ಇರಿಸಿಕೊಂಡಿದೆ. 5000 ಕೋಟಿ ಮೌಲ್ಯದ ಭೂಮಿಯನ್ನು ಕೇವಲ 35 ಕೋಟಿಗೆ ಮಾರುತ್ತಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಸಂಪುಟದ ಮೇಲೆ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ ಎಂದು ಹೇಳಿದರು.
ಈ ಕುರಿತು ಎಚ್.ಕೆ ಪಾಟೀಲ್, ಇದು ಆತಂಕಕಾರಿ ಬೆಳವಣಿಗೆ ಎಂದು ಸಿಎಂಗೆ ಪತ್ರ ಬರೆದಿದ್ದಾರೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ರವನ್ನು ಕಡೆಗಣಿಸಿ ಮೊಂಡುತನ ಪ್ರದರ್ಶನ ಮಾಡ್ತಿದಾರೆ ಎಂದು ಆರೋಪಿಸಿದರು. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದ್ದು ಈ ಭೂಮಿ ಮಾರಾಟ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಭೂಮಿ ಲೀಸ್ ಕೊಡುವುದಕ್ಕೆ ಅವಕಾಶ ಇದೆ, ಮಾರಾಟ ಮಾಡಬೇಕಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಹೋರಾಟ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ವಿವಾದಿತ ಎತ್ತಿನಹೊಳೆ ಯೋಜನೆ ರಾಜ್ಯ ಸರಕಾರಕ್ಕೆ ಎಟಿಎಂ ಇದ್ದಂತೆ. ಈ ಯೋಜನೆಗೆ ಈವರಗೆ 6000 ಕೋಟಿ ಖರ್ಚು ಮಾಡಿದ್ದು, ಇದರಲ್ಲಿ ಬಹಳಷ್ಟು ಭ್ರಷ್ಟಾಚಾರ ನಡೆದಿದೆ. ದೊಡ್ಡ ನೀರಾವರಿ ಯೋಜನೆಗಳೆಲ್ಲ ಹಣ ಮಾಡುವ ಯೋಜನೆಗಳಾಗಿವೆ ಎಂದು ಕಿಡಿಕಾರಿದರು.
ಯೋಜನೆ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದ ಸಿಎಂ, ಮತ್ತಷ್ಟು ಹಣ ಬಿಡುಗಡೆ ಮಾಡ್ತಿದಾರೆ. ಕರಾವಳಿಯಲ್ಲಿ ಕುಡಿಯುವ ನೀರಿಗೆ ಬರ ಬಂದಿರುವ ವಿಚಾರವನ್ನು ಪರಿಗಣಿಸಿ, ಎರಡು ಜಿಲ್ಲೆಗಳ ಶಾಸಕರು ಸೇರಿ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ. ಬರ ನೀಗಿಸಲು ಬದಲಿ ಯೋಜನೆಗಾಗಿ ಆಗ್ರಹಿಸುತ್ತೇವೆ ಎಂದು ಅವರು ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications