ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೈಲಿಗೆ ಹೋಗುವ ಭಯದಿಂದ ಆತ್ಮಹತ್ಯೆಗೆ ಶರಣಾದ ಯುವಕ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 8: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿನ್ನಿಕಲ್ಲು ಎಂಬಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿ, ಜಾಮೀನಿನ ಮೇಲೆ ಹೊರಬಂದಿದ್ದ ಇಕ್ಬಾಲ್ ಸಾದಿಕ್ (27) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಇಕ್ಬಾಲ್, ಮೇಕೆ ಮೇಯಿಸಲು ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದ. ಈ ಸಂದರ್ಭ ಸ್ಥಳೀಯರು ಆತನನ್ನು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು. ಆ.29ರಂದು ಪೊಲೀಸರು ಇಕ್ಬಾಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಇಕ್ಬಾಲ್ ಜೈಲು ಪಾಲಾಗಿದ್ದ. ಬಳಿಕ ಈತ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ. ಆದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈತ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ.

ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಆತ್ಮಹತ್ಯೆ ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಆತ್ಮಹತ್ಯೆ

Mangaluru: Young Man Committs Suicide In The Fear Of Jail

ನಿನ್ನೆಯೂ ಮುಂಡೂರು ಬಳಿ ರಫೀಕ್ ಮತ್ತು ಇಕ್ಬಾಲ್ ಸಾದಿಕ್, ಇತರರ ನಡುವೆ ಜಗಳವಾಗಿದ್ದು, ಈ ಬಗ್ಗೆ ರಫೀಕ್ ತನ್ನ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸುತ್ತಾನೆ ಎಂದು ತುಂಬಾ ಹೆದರಿದ್ದ ಎನ್ನಲಾಗಿದೆ. ಮೊದಲೇ ಜೈಲಿನ ಅನುಭವ ಇದ್ದು, ಮತ್ತೆ ಜೈಲು ಸೇರುತ್ತೇನೆ ಎಂಬ ಭಯದಿಂದ ಈತ ಅ.7ರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
YonIqbal Sadiq (27), who was jailed for attempt to rape in Ninnikallu, Belthangadi taluk in Dakshina Kannada district, has committed suicide,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X