ತನ್ನ ಗೆಳತಿ ಹಿಂದೆ ಬಿದ್ದಿದ್ದಕ್ಕೆ ಇಂಥ ಘೋರ ಶಿಕ್ಷೆ ಕೊಟ್ಟ ಪ್ರೇಮಿ
ಮಂಗಳೂರು, ನವೆಂಬರ್ 30: ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 29ರ ಶುಕ್ರವಾರ ತಡರಾತ್ರಿ ನಡೆದಿದೆ.
ಇಡೀ ಕುಟುಂಬವನ್ನೇ ಬಲಿ ಪಡೆಯಿತು ಖಿನ್ನತೆ, ಮುಂಗೋಪ
ಕಾಸರಗೋಡು ಮೂಲದ ಸುದರ್ಶನ್ (20) ಹತ್ಯೆಯಾದ ಯುವಕ. ತಡರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಕೆಂಪು ಬಣ್ಣದ ಕಾರಿನಲ್ಲಿ ಬಂದ ಆರೋಪಿಗಳು ಸುದರ್ಶನ್ ಶವವನ್ನು ಕಾಪಿಕಾಡು ಬಳಿಯಿರುವ ಕೃಷಿ ಸಂಶೋಧನಾ ಕೇಂದ್ರದ ಎದುರುಗಡೆ ಎಸೆದು ಪರಾರಿಯಾಗಿದ್ದಾರೆ. ತೊಕ್ಕೊಟ್ಟು ನಿವಾಸಿ ರಕ್ಷಿತ್ ಎಂಬಾತ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರೌಡಿ ರಕ್ಷಿತ್ ಸುದರ್ಶನ್ ಮೃತದೇಹವನ್ನು ಎಸೆದು ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ಕರೆ ಮಾಡಿ ತಾನು ಹತ್ಯೆ ನಡೆಸಿರುವ ಬಗ್ಗೆ ತಿಳಿಸಿದ್ದಾನೆ. ತನ್ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದ ಸುದರ್ಶನ್ ನಿಗೆ ಎಚ್ಚರಿಕೆ ನೀಡಿದರೂ ತನ್ನ ಚಾಳಿ ನಿಲ್ಲಿಸದ ಕಾರಣ ಹತ್ಯೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೆ, ಶನಿವಾರ ತಾನೇ ಠಾಣೆಗೆ ಬಂದು ಶರಣಾಗುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.