ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತನ್ನ ಗೆಳತಿ ಹಿಂದೆ ಬಿದ್ದಿದ್ದಕ್ಕೆ ಇಂಥ ಘೋರ ಶಿಕ್ಷೆ ಕೊಟ್ಟ ಪ್ರೇಮಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 30: ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 29ರ ಶುಕ್ರವಾರ ತಡರಾತ್ರಿ ನಡೆದಿದೆ.

ಇಡೀ ಕುಟುಂಬವನ್ನೇ ಬಲಿ ಪಡೆಯಿತು ಖಿನ್ನತೆ, ಮುಂಗೋಪಇಡೀ ಕುಟುಂಬವನ್ನೇ ಬಲಿ ಪಡೆಯಿತು ಖಿನ್ನತೆ, ಮುಂಗೋಪ

ಕಾಸರಗೋಡು ಮೂಲದ ಸುದರ್ಶನ್ (20) ಹತ್ಯೆಯಾದ ಯುವಕ. ತಡರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಕೆಂಪು ಬಣ್ಣದ ಕಾರಿನಲ್ಲಿ ಬಂದ ಆರೋಪಿಗಳು ಸುದರ್ಶನ್ ಶವವನ್ನು ಕಾಪಿಕಾಡು ಬಳಿಯಿರುವ ಕೃಷಿ ಸಂಶೋಧನಾ ಕೇಂದ್ರದ ಎದುರುಗಡೆ ಎಸೆದು ಪರಾರಿಯಾಗಿದ್ದಾರೆ. ತೊಕ್ಕೊಟ್ಟು ನಿವಾಸಿ ರಕ್ಷಿತ್ ಎಂಬಾತ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Young Man Stabbed And Killed Brutally In Ullala

ರೌಡಿ ರಕ್ಷಿತ್ ಸುದರ್ಶನ್ ಮೃತದೇಹವನ್ನು ಎಸೆದು ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ಕರೆ ಮಾಡಿ ತಾನು ಹತ್ಯೆ ನಡೆಸಿರುವ ಬಗ್ಗೆ ತಿಳಿಸಿದ್ದಾನೆ. ತನ್ನ ಪ್ರಿಯತಮೆಗೆ ಕಿರುಕುಳ ನೀಡುತ್ತಿದ್ದ ಸುದರ್ಶನ್ ನಿಗೆ ಎಚ್ಚರಿಕೆ ನೀಡಿದರೂ ತನ್ನ ಚಾಳಿ ನಿಲ್ಲಿಸದ ಕಾರಣ ಹತ್ಯೆ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೆ, ಶನಿವಾರ ತಾನೇ ಠಾಣೆಗೆ ಬಂದು ಶರಣಾಗುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

English summary
A young man was brutally stabbed to death by a group of criminals took place late on Friday, November 29 in ullala of mangaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X