ಮಂಜೇಶ್ವರ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಯುವಕ ಸಾವು
ಮಂಗಳೂರು, ಡಿಸೆಂಬರ್ 16: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ ಮಂಜೇಶ್ವರದಲ್ಲಿ ನಡೆದಿದೆ.
ಮೃತ ಯುವಕನನ್ನು ಉಪ್ಪಳ ಜೋಡುಕಲ್ಲು ಕಯ್ಯಾರು ನಿವಾಸಿಯಾದ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಮೀಯಪದವು ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ದೇರಂಬಲ ತಂಡದ ಪರ ಬೌಲಿಂಗ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ.
ಕೂಡಲೇ ಸಹ ಆಟಗಾರರು ಪದ್ಮನಾಭನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದರು. ಪದ್ಮನಾಭ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
Comments
English summary
Player collapses while playing cricket tournament at Manjeshwara due to massive heart attack on December 16. The deceased is identified as Padmanaba from Manjeshwara.
Story first published: Saturday, December 16, 2017, 18:34 [IST]