ಈಜಲು ತೆರಳಿದ್ದ ಮಗನನ್ನು ಸ್ನೇಹಿತರೇ ಕೊಂದರೆಂದು ದೂರು ಕೊಟ್ಟ ಪೋಷಕರು
ಮಂಗಳೂರು, ಅಕ್ಟೋಬರ್ 4: ಈಜಲು ಕೆರೆಗೆ ತೆರಳಿದ್ದ ಯುವಕ ವಾಪಸ್ ಮನೆಗೆ ಬಂದಿಲ್ಲ ಎಂದು ಆತನ ಪೋಷಕರು, ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಶಂಕೆ ವ್ಯಕ್ತಪಡಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕ ಮೃತಪಟ್ಟಿದ್ದಾನೆ ಎಂಬುದು ಪೋಷಕರು ಆರೋಪ. ಮಂಗಳವಾರ ತಡರಾತ್ರಿ ನಡೆದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬುವರ ಮಗ ಮಕ್ಸೂದ್ ಸದ್ಯಕ್ಕೆ ಪತ್ತೆಯಾಗಿಲ್ಲ. ಆತ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮಂಗಳವಾರ ಸಂಜೆ ತನ್ನ ಸ್ನೇಹಿತರ ಜೊತೆ ಸುರತ್ಕಲ್ ಬಳಿ ಇರುವ ಶಿಬರೂರು ದೇವಸ್ಥಾನ ಸಮೀಪದ ಕೆರೆಯ ಕಡೆಗೆ ಈಜಲೆಂದು ತೆರಳಿದ್ದ.
ರಾತ್ರಿಯಾಗುತ್ತಲೇ ಉಳಿದ ಸ್ನೇಹಿತರು ತಮ್ಮ ಮನೆಗಳಿಗೆ ವಾಪಸ್ ಆಗಿದ್ದು, ಮಕ್ಸೂದ್ ಮಾತ್ರ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಆತನ ಪೋಷಕರು ಸ್ನೇಹಿತರನ್ನು ವಿಚಾರಿಸಿದಾಗ ಅವರು ಸರಿಯಾಗಿ ಉತ್ತರಿಸಿಲ್ಲ. ಆದ್ದರಿಂದ ಸುರತ್ಕಲ್ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ತಕ್ಷಣವೇ ಶಿಬರೂರು ಬಳಿ ತೆರಳಿದ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಯಾವ ಸುಳಿವು ಪತ್ತೆಯಾಗಿಲ್ಲ.
ಮಕ್ಸೂದ್ ಪೋಷಕರು, ಇದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ. ನಮ್ಮ ಮಗನನ್ನು ಕೊಲೆ ಮಾಡಲಾಗಿದೆ ಎಂದು ದೂರಿದ್ದಾರೆ. ಮಕ್ಸೂದ್ ಜೊತೆ ತೆರಳಿದ್ದ ನಾಲ್ವರನ್ನು ಬುಧವಾರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮಕ್ಸೂದ್ ಪತ್ತೆಗಾಗಿ ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನೀರಿನಲ್ಲಿ ವಾಚ್ ಮತ್ತು ಮೊಬೈಲ್ ಫೋನ್ ಪತ್ತೆಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications