ಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮಂಗಳೂರು, ಜೂನ್ 29: ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೋರ್ವ ಬರ್ಬರವಾಗಿ ಚೂರಿಯಿಂದ ಇರಿದು, ಬಳಿಕ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ನಡೆದಿದೆ.
ದೇರಳಕಟ್ಟೆಯ ಬಗಂಬಿಲ ಸಮೀಪ ಶುಕ್ರವಾರ ಸಂಜೆ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಮಂಗಳೂರು ಶಕ್ತಿನಗರ ಮೂಲದ ಸುಶಾಂತ್ ಎಂಬ ಯುವಕ ಬಗಂಬಿಲ ನಿವಾಸಿ ವಿದ್ಯಾರ್ಥಿನಿ ದೀಕ್ಷಾ ಎಂಬುವಳಿಗೆ ಚೂರಿಯಿಂದ ಇರಿದು ತಾನೂ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುಶಾಂತ್ ಹಾಗೂ ದೀಕ್ಷಾ ಪರಸ್ಪರ ಪ್ರೀತಿಸುತ್ತಿದ್ದು, ಕೆಲ ದಿನಗಳಿಂದ ಸುಶಾಂತ್ ನನ್ನು ನಿರಾಕರಿಸಿದ್ದ ಯುವತಿಯ ವಿರುದ್ಧ ಸುಶಾಂತ್ ಕೋಪಗೊಂಡಿದ್ದ. ಎರಡು ದಿನಗಳ ಹಿಂದೆಯೇ ದೀಕ್ಷಾ ಮೇಲೆ ದಾಳಿ ನಡೆಸಲು ಸುಶಾಂತ್ ಸ್ಕೆಚ್ ಹಾಕಿದ್ದ ಎನ್ನಲಾಗಿದೆ. ಕೃತ್ಯ ಎಸಗುವ ಮೊದಲು ಸುಶಾಂತ್ ಗಾಂಜಾ ಸೇವಿಸಿದ್ದ ಎಂದು ಮೂಲಗಳು ತಿಳಿಸಿವೆ.

ಸುಶಾಂತ್ 50 ಸಾವಿರ ರೂಪಾಯಿ ಖರ್ಚು ಮಾಡಿ ಈಚೆಗಷ್ಟೇ ಯುವತಿಯ ಹುಟ್ಟಿದ ಹಬ್ಬ ಆಚರಿಸಿದ್ದ. ಹುಟ್ಟುಹಬ್ಬದ ಮರುದಿನವೇ ಯುವತಿ, ಸುಶಾಂತ್ ನಿಂದ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ನಿನ್ನೆ ಮಧ್ಯಾಹ್ನ ದವರೆಗೂ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸುಶಾಂತ್, ಸಂಜೆ ಈ ಕೃತ್ಯ ಎಸಗಿದ್ದಾನೆ. ಸುಮಾರು 12 ಬಾರಿ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications